ರಾಜಕೀಯ

ಮಾಜಿ ಶಾಸಕ ರೇಣುಕಾಚಾರ್ಯ ಅಣ್ಣನ ಮಗ ಸಾವು ಪ್ರಕರಣ;ಅಪಘಾತದಿಂದಲೇ ಸಾವು ಸಂಭವಿಸಿತೇ? 1 ವರ್ಷದ ಬಳಿಕ ಬಂದ ವರದಿಯಲ್ಲೇನಿದೆ?

164

ನ್ಯೂಸ್ ನಾಟೌಟ್ : ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ(MP Renukacharya) ಸಹೋದರನ ಪುತ್ರನ ಸಾವು ಪ್ರಕರಣಕ್ಕೆ ಕೊನೆಗೂ ಕಾರಣ ತಿಳಿದಿದೆ.ಸುದೀರ್ಘ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಫೈನಲ್ ರಿಪೋರ್ಟ್ ಸಲ್ಲಿಕೆ ಮಾಡಿದ್ದು, ಒಂದು ವರ್ಷಗಳ ಹಿಂದೆ ದಾವಣಗೆರೆಯಲ್ಲಿ ನಡೆದಿದ್ದ ಘಟನೆಗೆ ಅಪಘಾತವೇ ಕಾರಣ ಎಂದು ಹೇಳಿದೆ.

ಘಟನೆಯಾದಾಗಿನಿಂದಲೂ ಈ ಪ್ರಕರಣ ಭಾರಿ ಚರ್ಚೆಗೆ ಕಾರಣವಾಗಿತ್ತು.ಈ ಅಪಘಾತವಲ್ಲ ಎಂದು ಹೇಳಲಾಗಿತ್ತು.ಇದೀಗ ಹಲವು ಅನುಮಾನಗಳಿಗೆ ತೆರೆ ಎಳೆದಂತಾಗಿದೆ.ದಾವಣಗೆರೆಯ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳ ತಂಡ ವರದಿ ಸಲ್ಲಿಕೆ ಮಾಡಿದ್ದು, ಇದು ಕೊಲೆಯಿಂದ ಸಂಭವಿಸಿರೋ ಸಾವಲ್ಲ. ಅಪಘಾತದಿಂದ ಸಂಭವಿಸಿರೋ ಸಾವು ಎಂದು ಸಿಐಡಿ ವರದಿಯಲ್ಲಿ ಉಲ್ಲೇಖಿಸಿದೆ.

ಕಳೆದ ನವೆಂಬರ್‌ ತಿಂಗಳಲ್ಲಿ ರೇಣುಕಾಚಾರ್ಯರ ಸಹೋದರನ ಮಗ ಚಂದ್ರು ಅಲಿಯಾಸ್ ಚಂದ್ರಶೇಖರ್ (Chandrashekhar) ನಾಪತ್ತೆಯಾದ್ದರು.ರಸ್ತೆ ಬದಿಯಲ್ಲಿ ಅಪಘಾತದ ಸ್ಥಿತಿಯಲ್ಲಿ ಕಾರು ಪತ್ತೆಯಾಗಿತ್ತು.ಅದಾದ ಕೆಲ ಸಮಯಗಳಲ್ಲಿ ಚಂದ್ರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿತು. ಆಗ ರೇಣುಕಾಚಾರ್ಯ ಇದೊಂದು ಕೊಲೆ, ಉದ್ದೇಶ ಪೂರ್ವಕ ಘಟನೆ ಎಂದಿದ್ದರು. ಪ್ರಕರಣ ಸಿಐಡಿಗೆ ನೀಡಲಾಗಿತ್ತು. ಬಳಿಕ ಸುದೀರ್ಘ ತನಿಖೆ ನಡೆಸಿದ ಸಿಐಡಿ ಪ್ರಕರಣದ ಅಂತಿಮ ಹಂತದ ವರದಿಯನ್ನು ಸಲ್ಲಿಕೆ ಮಾಡಿದೆ.ಎಫ್‌ಎಸ್‌ಎಲ್ ಮತ್ತು ತಾಂತ್ರಿಕ ಸಾಕ್ಷ್ಯಗಳು ಇದೊಂದು ಅಪಘಾತ ಎಂದು ವರದಿ ನೀಡಿದ್ದು, ಪ್ರಕರಣ ಸ್ಪಷ್ಟ ಕಾರಣದೊಂದಿಗೆ ಮುಕ್ತಾಯಗೊಳಿಸಿದೆ. 

See also  ಎಮ್ಮೆ, ಕೋಣಗಳನ್ನು ಕಡಿಯುವುದಾದರೆ ಗೋವನ್ನು ಏಕೆ ಹತ್ಯೆ ಮಾಡಬಾರದು ಎಂದಿದ್ದ ಸಚಿವರು ಈಗ ಯೂಟರ್ನ್..! ಗೋಹತ್ಯೆ ನಿಷೇಧ ಹಿಂಪಡೆಯುವ ಬಗ್ಗೆ ಪಶುಸಂಗೋಪನೆ ಸಚಿವರು ಹೇಳಿದ್ದೇನು?
  Ad Widget   Ad Widget   Ad Widget   Ad Widget   Ad Widget   Ad Widget   Ad Widget