ನ್ಯೂಸ್ ನಾಟೌಟ್ :ಯುವ ನಾಯಕ , ದಕ್ಷಿಣ ಕನ್ನಡದ ಬಹು ಸಂಖ್ಯಾತ ಸಮುದಾಯಕ್ಕೆ ಸೇರಿದ ಕಿರಣ್ ಗೌಡ ಬುಡ್ಲೆಗುತ್ತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಗೊಂಡಿದ್ದಾರೆ. ಅಂತೆಯೇ ಕಾರ್ಯದರ್ಶಿಯಾಗಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿದ್ದ ರಾಧಾಕೃಷ್ಣ ಬೊಳ್ಳೂರು ಅವರನ್ನು ನೇಮಕ ಮಾಡಲಾಗಿದೆ.
ಕಿರಣ್ ಬುಡ್ಲೆಗುತ್ತು ಅವರು ಕಳೆದ 23 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಜೊತೆ ನಂಟು ಬೆಸೆದುಕೊಂಡು ಹಲವಾರು ನಾಯಕತ್ವಗಳನ್ನು, ಹೋರಾಟಗಳನ್ನು ವಹಿಸಿಕೊಂಡು ಬಂದಿದ್ದಾರೆ.ಮಂಗಳೂರು ಲೋಕಸಭಾ ಎಂಪಿ ಅಭ್ಯರ್ಥಿಯ ಪಟ್ಟಿಯಲ್ಲಿಯೂ ಇವರ ಹೆಸರು ಪದೇ ಪದೇ ಕೇಳಿ ಬರುತ್ತಿದೆ. ಹಲವು ಸಮಾಜಗಳ ಮತ್ತು ಸಂಘಟನೆಗಳ ಜತೆ ನಿಕಟ ಸಂಪರ್ಕ ಇಟ್ಟುಕೊಂಡಿರುವ ಕಿರಣ್ ಗೌಡ ಬುಡ್ಲೆ ಗುತ್ತು ಹುಟ್ಟು ಸಂಘಟಕ, ಸೈಲೆಂಟ್ ಕೆಲಸಗಾರ.
ಇನ್ನು ರಾಧಾಕೃಷ್ಣ ಬೊಳ್ಳೂರು ಅವರು ಬಿಜೆಪಿ ರೈತಮೋರ್ಚಾ ಮಾಜಿ ಜಿಲ್ಲಾಧ್ಯಕ್ಷರಾಗಿದ್ದರು. ಬಳಿಕ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಕೆಲವು ತಿಂಗಳುಗಳ ಹಿಂದೆ ಅಧಿಕೃತವಾಗಿ ಕಾಂಗ್ರೆಸ್ಗೆ ಸೇರ್ಪಡೆ ಗೊಂಡರು.