Latestಕ್ರೈಂವೈರಲ್ ನ್ಯೂಸ್

ಕಾಡಿನಲ್ಲಿ ಸಿಕ್ಕಿದ್ದ ಹೆಣ್ಣು ಮಗುವಿನ ತಂದೆ-ತಾಯಿಯ ವಿವಾಹ! ಕುಟುಂಬಿಕರ ಸಮ್ಮುಖದಲ್ಲಿ ಕುತ್ರೊಟ್ಟು ದೇವಸ್ಥಾನದಲ್ಲಿ ಮದುವೆ!

1.4k

ನ್ಯೂಸ್‌ ನಾಟೌಟ್: ಬೆಳಾಲಿನ ಮುಂಡ್ರೊಟ್ಟು ಕಾಡಿನಲ್ಲಿ ಸಿಕ್ಕ ಮಗುವಿನ ತಂದೆ-ತಾಯಿ ಎ.2 ರಂದು ಪತ್ತೆಯಾದ ಬೆನ್ನಲ್ಲೇ ಇದೀಗ ಎ.6 ರಂದು ಮದುವೆಯಾಗಿದ್ದಾರೆ. ಎರಡು ಕುಟುಂಬದವರ ಒಪ್ಪಿಗೆಯ ಮೇರೆಗೆ ನಡ ಗ್ರಾಮದ ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ವಿವಾಹವಾಗಿದ್ದಾರೆ ಎಂದು ತಿಳಿದು ಬಂದಿದೆ.ದೇವಸ್ಥಾನದ ಅರ್ಚಕರ ಪೌರೋಹಿತ್ಯದಲ್ಲಿ ಮದುವೆ ನಡೆದಿದ್ದು, ಎರಡೂ ಕುಟುಂಬದವರು ಈ ಮದುವೆಗೆ ಹಾಜರಿದ್ದರು.

ಬೆಳಾಲು ಮಾಯದ ತಿಮ್ಮಪ್ಪ ಗೌಡರ ಪುತ್ರ ರಂಜಿತ್ ಮತ್ತು ಧರ್ಮಸ್ಥಳದ ಕೊಳಂಗಾಜೆ ಧರ್ಣಪ್ಪ ಗೌಡರ ಪುತ್ರಿ ಸುಶ್ಮಿತಾ ಅವರ ವಿವಾಹ ಎ.6 ರಂದು ನಡೆದಿದೆ. ಮಗುವನ್ನು ಮುಂದೆ ಕಾನೂನಾತ್ಮಕವಾಗಿ ಪಡೆಯುವುದಾಗಿ ಕುಟುಂಬದ ಮೂಲಗಳು ತಿಳಿಸಿರುವ ಕುರಿತು ವರದಿಯಾಗಿದೆ.ಈ ಮೂಲಕ ಬೆಳಾಲು ಕಾಡಿನಲ್ಲಿ ಸಿಕ್ಕ ಮಗುವಿನ ಪ್ರಕರಣ ಸುಖಾಂತ್ಯಗೊಂಡಂತಾಗಿದೆ.

See also  ಬೇಂಗಮಲೆ: ಬೈಕ್ ನಲ್ಲಿ ಬಂದವರು ಸ್ಕಿಡ್ ಆಗಿ ರಸ್ತೆಗೆ ಪಲ್ಟಿ, ಒಬ್ಬರಿಗೆ ಗಾಯ- ಇನ್ನೋರ್ವರಿಗೆ ಗಂಭೀರ ಗಾಯ
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget