ನ್ಯೂಸ್ ನಾಟೌಟ್: ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಿನ್ನೆ (ಎಪ್ರಿಲ್ ೨೦) ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಸರಗಳ್ಳರು ತಮ್ಮ ಕೈಚಳಕ ತೋರಿದ ಪ್ರಸಂಗ ನಡೆದಿದೆ.
ಸರಗಳ್ಳರು ತಮ್ಮ ಕೈ ಚಳಕ ತೋರಿದ್ದು, ಸರ ಕಿತ್ತು ಓಡುತ್ತಿದ್ದವರನ್ನು ಬೆನ್ನಟ್ಟಿ ಪೊಲೀಸರು ಹಿಡಿದಿದ್ದಾರೆ. ಸಾರ್ವಜನಿಕರ ಸಹಾಯದೊಂದಿಗೆ ಇಬ್ಬರು ಕಳ್ಳರನ್ನ ಪೊಲೀಸರು ಸೆರೆಹಿಡಿದಿದ್ದಾರೆ ಎನ್ನಲಾಗಿದೆ.
ಪ್ರಮಾಣವಚನ ಕಾರ್ಯಕ್ರಮ ಮುಗಿದು ಜನ ಹೊರಬರುತ್ತಿದ್ದಂತೆಯೇ ಕಳ್ಳತನ ನಡೆದಿದೆ ಎನ್ನಲಾಗಿದ್ದು, ಇಬ್ಬರೂ ಕಳ್ಳರನ್ನು ಸಂಪಂಗಿ ರಾಮನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.