ಕ್ರೈಂವೈರಲ್ ನ್ಯೂಸ್

ಚಿಕಿತ್ಸೆಗೆ ಹೋಗಿದ್ದ ಆಸ್ಪತ್ರೆಯಲ್ಲಿ ಚಿನ್ನದ ಕರಿಮಣಿ ಕಾಣೆ..! ನರ್ಸ್ ವಿರುದ್ಧ ಎಫ್ ಐ ಆರ್ ದಾಖಲು

155

ನ್ಯೂಸ್‌ ನಾಟೌಟ್‌ : ಎದೆ ನೋವು ಎಂದು ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ದ ಮಹಿಳೆಯ ಮೈಮೇಲಿದ್ದ ಮಾಂಗಲ್ಯ ಸರವನ್ನು ಕದ್ದಿದ್ದಾರೆ ಎಮದು ಆರೋಪಿಸಲಾಗಿದೆ.

ಕರಿಮಣಿ ಸರ ಕಳ್ಳತನದ ಹಿಂದೆ ಆಸ್ಪತ್ರೆ ಸಿಬ್ಬಂದಿ ಕೈವಾಡ ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ ಮಹಿಳೆ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ರಾಧಾ ಎಂಬವರು ಫೆಬ್ರವರಿ 8 ರಂದು ಮೂಡಲ್ ಪಾಳ್ಯದಲ್ಲಿರೋ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ದಾರೆ.

ಎದೆ ನೋವು ಇದ್ದ ಕಾರಣ ಇಸಿಜಿ ಮಾಡಬೇಕು ಚಿನ್ನದ ಸರ ತಗೆದು ಇಡುವಂತೆ ನರ್ಸ್ ಅಕ್ಷತಾ ಸೂಚಿಸುತ್ತಾರೆ. ಮಾಂಗಲ್ಯ ಸರ ತೆಗೆದ ಬಳಿಕ ಪತಿಗೆ ಕೊಡಲು ಮಹಿಳೆ ಸೂಚಿಸಿದ್ದಾರೆ ಎನ್ನಲಾಗಿದೆ. ನರ್ಸ್ ದಿಂಬಿನ ಕೆಳಗಡೆ ಇಡುವಂತೆ ಸೂಚಿಸಿದ್ದಾರೆ. ಅದರಂತೆ ಮಹಿಳೆ ಕೆಳಗಡೆ ಸರ ಇಟ್ಟು ECG ಮಾಡಿಸಿಕೊಂಡು ಗಾಬರಿಯಲ್ಲಿ ಸರ ಮರೆತು ಹೋಗಿದ್ದಾರೆ ವರದಿ ತಿಳಿಸಿದೆ.

ರಾಧಾಗೆ ಮಾತ್ರೆ ಇಂಜೆಕ್ಷನ್ ಕೊಟ್ಟಿದ್ದ ಕಾರಣ ಮಾಂಗಲ್ಯ ಸರ ಆಸ್ಪತ್ರೆಯಲ್ಲಿ ಬಿಟ್ಟಿರೋದನ್ನ ಮರೆತು ನಿದ್ದೆ ಮಾಡಿಬಿಟ್ಟಿದ್ದಾರೆ. ಮಾರನೇ ದಿನ ಸ್ನಾನಕ್ಕೆ ಹೋದಾಗ ಮಹಿಳೆಗೆ ಸರದ ಬಗ್ಗೆ ಅರಿವಾಗಿದೆ. ಕೂಡಲೇ ನೆನಪಿಸಿಕೊಂಡು ಆಸ್ಪತ್ರೆಗೆ ಹೋಗಿ ವಿಚಾರಿಸಿದಾಗ ಆಸ್ಪತ್ರೆ ಸಿಬ್ಬಂದಿ ಸರಿಯಾಗಿ ರೆಸ್ಪಾನ್ಸ್ ಮಾಡಿಲ್ಲ ಎಂದು ದೂರಲಾಗಿದೆ. ಸಿಸಿಟಿವಿ ಪರಿಶೀಲನೆ ಮಾಡಿ ನೋಡಿದಾಗ ನರ್ಸ್ ಒಬ್ಬರು ಕೈಯಲ್ಲಿ ಸರ ಹಿಡಿದಿದ್ದದ್ದು ಗೊತ್ತಾಗಿದೆ ಎನ್ನಲಾಗಿದೆ. ಹಾಗಾಗಿ ಸಿಸಿಟಿವಿ ದೃಶ್ಯಗಳೊಂದಿಗೆ ದೂರು ಕೊಟ್ಟಿದ್ದು, ಗೋವಿಂದರಾಜ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

See also  ಮೆಟ್ರೊ ಬ್ರಿಡ್ಜ್ ಕೆಳಗೆ ಇಬ್ಬರು ಹುಡುಗಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಬಾಲಕ..! ಶಾಲಾ ಸಮವಸ್ತ್ರದಲ್ಲಿ ನಡೆಯಿತು ರಾಸಲೀಲೆ! ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget   Ad Widget   Ad Widget   Ad Widget   Ad Widget