ಕರಾವಳಿ

ಭೂಕಂಪ ಆತಂಕದ ಹಿನ್ನೆಲೆಯಲ್ಲಿ ವಿಶೇಷ ಪೂಜೆ

425

ನ್ಯೂಸ್ ನಾಟೌಟ್: ಕೊಡಗು ಹಾಗೂ ದಕ್ಷಿಣ ಕನ್ನಡದ ಗಡಿ ಭಾಗದ ಸುಳ್ಯ ತಾಲೂಕಿನಲ್ಲಿ ಭೂಕಂಪನವಾಗುತ್ತಿರುವುದರಿಂದ ಜನರು ಭಯದಿಂದ ಬದುಕುವಂತಾಗಿದೆ. ಈ ಹಿನ್ನೆಲೆಯಲ್ಲಿ ಸೀಮೆ ದೇವರಾದ ತೊಡಿಕಾನ ಶ್ರೀಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನಾಳೆ ಮಧ್ಯಾಹ್ನ 12.30 ಕ್ಕೆ ವಿಶೇಷ ಸಾಮೂಹಿಕ ಪೂಜೆ ನಡೆಯಲಿದೆ.

ಸಂಪಾಜೆ, ಚೆಂಬು, ತೊಡಿಕಾನ, ಪೆರಾಜೆ ಹಾಗೂ ಸುಳ್ಯ ತಾಲೂಕಿನಲ್ಲಿ ಸಂಭವಿಸುತ್ತಿರುವ ಕಂಪನದ ಅನುಭವ ನಿಲ್ಲಬೇಕು ಹಾಗೂ ಜನರ ಆಸ್ತಿಪಾಸ್ತಿಗಳಿಗೆ ಅಥವಾ ಯಾವುದೇ ಜೀವ ಹಾನಿ ಆಗಬಾರದು ಎಂದು ದೇವರಲ್ಲಿ ಪ್ರಾರ್ಥನೆಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಳ್ಳಬೇಕಾಗಿ ಮನವಿ ಮಾಡಿಕೊಳ್ಳಲಾಗಿದೆ.

See also  ಮಡಿಕೇರಿ:ನಾಪತ್ತೆಯಾಗಿದ್ದ ಇಬ್ಬರು ಪಿಯು ವಿದ್ಯಾರ್ಥಿನಿಯರು ಮಲ್ಪೆಯಲ್ಲಿ ನೀರು ಪಾಲು,ಹೆಣ್ಣು ಮಕ್ಕಳು ಮನೆ ಬಿಟ್ಟು ಮಲ್ಪೆಗೆ ಬಂದಿದ್ದು ಹೇಗೆ..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget