ಕ್ರೈಂಚಿಕ್ಕಮಗಳೂರು

ಹುಲಿ ಉಗುರು: ಅರಣ್ಯಾಧಿಕಾರಿ ಅಮಾನತಾದದ್ದೇಕೆ ..? ಯಾರು ಈ ಅಧಿಕಾರಿ?

163

ನ್ಯೂಸ್ ನಾಟೌಟ್: ಕುತ್ತಿಗೆಯಲ್ಲಿ ಧರಿಸಿದ್ದ ಚೈನಿನ ಲಾಕೆಟ್ ನಲ್ಲಿ ಹುಲಿಯ ಒರಿಜಿನಲ್ ಉಗುರು ಹಾಕಿಕೊಂಡದ್ದಕ್ಕೆ ನೇರವಾಗಿ ಬಿಗ್ ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾಗಿ ಜೈಲಿನ ಹಿಂದೆ ಕಂಬಿ ಎಣಿಸುತ್ತಿರುವ ಸಂದರ್ಭದಲ್ಲಿ ಹುಲಿ ಉಗುರು, ಹುಲಿ ಚರ್ಮ ಮತ್ತಷ್ಟು ಸೆಲೆಬ್ರಿಟಿಗಳಿಗೆ, ಪ್ರಮುಖ ವ್ಯಕ್ತಿಗಳಿಗೆ ಕಂಠಕವಾಗುವ ಸಾಧ್ಯತೆಯಿದೆ.ಹುಲಿ ಉಗುರು ವಿಚಾರ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ.

ಚಿಕ್ಕಮಗಳೂರಿನ ಕಳಸದ (Kalasa) ಅರಣ್ಯಾಧಿಕಾರಿಯೊಬ್ಬರು ಹುಲಿ ಉಗುರು (Tiger Claw) ಧರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಈಗ ಅಮಾನತುಗೊಂಡಿದ್ದಾರೆ. ಅರೆನೂರು ಗ್ರಾಮದ ಸುಪ್ರೀತ್ ಹಾಗೂ ಅಬ್ದುಲ್ ಎಂಬವರು ಆಲ್ದೂರು ವಲಯ ಅರಣ್ಯಾಧಿಕಾರಿಗೆ ಈ ಸಂಬಂಧ ದೂರು ನೀಡಿದ್ದರು.

ಕಳಸದ ಡಿಆರ್ ಎಫ್‍ಓ ದರ್ಶನ್ ಅಮಾನತಾದ ಅಧಿಕಾರಿಯಾಗಿದ್ದಾರೆ ಎಮದು ವರದಿ ತಿಳಿಸಿದ್ದು, ಇವರ ವಿರುದ್ಧ ಹುಲಿ ಉಗುರು ಧರಿಸಿದ್ದ ದೂರು ಬಂದಿತ್ತು ಎನ್ನಲಾಗಿದೆ.

ಅಧಿಕಾರಿ ವಿರುದ್ಧ, ಹುಲಿ ಉಗುರು ಧರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಲಿಖಿತ ದೂರು ನೀಡಲಾಗಿತ್ತು. ಅಲ್ಲದೇ ವನ್ಯ ಜೀವಿ ಕಾಯ್ದೆ ಅಡಿ ಪ್ರಕರಣ ದಾಖಲಿಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೊಪ್ಪದ ಡಿಎಫ್‍ಓ ನಂದೀಶ್ ಎಂಬವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

https://www.youtube.com/watch?v=mtKTEHG9O4I
See also  ತುಂಡುಡುಗೆ ತೊಟ್ಟು ತೃತೀಯ ಲಿಂಗಿ ಮಹಿಳೆಯಂತೆ ಅಶ್ಲೀಲ ವಿಡಿಯೋ ಮಾಡ್ತಾನೆ ಎಂದು ಗಂಡನ ವಿರುದ್ಧ ದೂರು ದಾಖಲಿಸಿದ ಪತ್ನಿ..! ಸರ್ಕಾರಿ ವೈದ್ಯನ ವಿರುದ್ಧ ಎಫ್.ಐ.ಆರ್..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget