ಕರಾವಳಿ

ಉಡುಪಿ:ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣ,ಸಂಜೆಯೊಳಗೆ ಸಿಗಲಿದೆ ಪ್ರಕರಣದ ಪೂರ್ಣ ಚಿತ್ರಣ: ಎಸ್​ಪಿ ಡಾ. ಅರುಣ್

148

ನ್ಯೂಸ್ ನಾಟೌಟ್ : ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣ ಬಗ್ಗೆ ಉಡುಪಿ ಎಸ್ಪಿ ಡಾ. ಅರುಣ್ ಮಾತನಾಡಿದ್ದು, ಪ್ರಕರಣ ಸಂಬಂಧ ಹಲವಾರು ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ ಎಂದಿದ್ದಾರೆ. ಕೊಲೆ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದಿದ್ದೇವೆ. ಟೆಕ್ನಿಕಲ್ ಮತ್ತು ಹ್ಯೂಮನ್ ಇಂಟೆಲಿಜೆನ್ಸ್ ಮೇರೆಗೆ ಕರೆದುಕೊಂಡು ಬರಲಾಗಿದ್ದು, ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದು ಹೇಳಿದ್ದಾರೆ.

ಸದ್ಯ ಚೌಗಲೆಯನ್ನು ವಿಚಾರಣೆ ಮಾಡುತ್ತಿದ್ದೇವೆ. ಸಿಆರ್​​ಪಿಎಫ್ ಅಲ್ಲ, ಸಿವಿಲ್ ಪೊಲೀಸ್​ನಲ್ಲಿ ಇದ್ದಾನೆ ಎಂಬ ಮಾಹಿತಿ ಇದೆ. ಉಡುಪಿ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಪೊಲೀಸರ ಸಹಕಾರದಿಂದ ವಶಕ್ಕೆ ಪಡೆಯಲಾಗಿದೆ.ವಶದಲ್ಲಿರುವ ಶಂಕಿತ ವ್ಯಕ್ತಿಗೆ 39- 40 ವರ್ಷ ವಯಸ್ಸು ಅಂದಾಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಶಂಕಿತರ ವಿಚಾರಣೆ ಮಾಡುತ್ತಿದ್ದೇವೆ. ಜಿಲ್ಲೆಯ ಎಲ್ಲಾ ಕಡೆ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಬಂದೋಬಸ್ತ್ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.ಬಲವಾದ ಶಂಕೆಯ ಮೇರೆಗೆ ಪ್ರವೀಣ್ ಅರುಣ್ ಚೌಗಲೆಯನ್ನ ವಶಕ್ಕೆ ಪಡೆಯಲಾಗಿದೆ. ವಿಚಾರಣೆ ವೇಳೆ ಕೃತ್ಯದಲ್ಲಿ ಪಾತ್ರವಿದ್ದರೆ ಬಂಧಿಸುತ್ತೇವೆ.ಪ್ರಕರಣ ಸಂಬಂಧ 15 ರಿಂದ 20 ಜನರ ವಿಚಾರಣೆ ನಡೆಯುತ್ತಿದೆ.ಉಡುಪಿ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಪೊಲೀಸರ ಸಹಕಾರದಿಂದ ವಶಕ್ಕೆ ಪಡೆದಿದ್ದೇವೆ. ಜಿಲ್ಲೆಯ ಎಲ್ಲಾ ಕಡೆ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಯಾವುದೇ ವದಂತಿಗಳಿಗೆ ಯಾರು ಕಿವಿಕೊಡಬಾರದು. ತನಿಖೆ ನಂತರ ಪ್ರಕರಣದ ಬಗ್ಗೆ ಪೂರ್ಣ ಚಿತ್ರಣವನ್ನು ಕೊಡುತ್ತೇವೆ. ಮಲ್ಪೆಯ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ ಗೌಡ ಪ್ರಕರಣದ ತನಿಖಾಧಿಕಾರಿಯಾಗಿದ್ದಾರೆ ಎಂದು ಹೇಳಿದ್ದಾರೆ.

See also  ಓದುಗರ ಕಾರ್ನರ್, ಶಾಲಾ, ಕಾಲೇಜಿಗೆ ಈ ರಜೆ ಯಾಕೆ…?
  Ad Widget   Ad Widget   Ad Widget   Ad Widget   Ad Widget   Ad Widget   Ad Widget