ತಿರುಪತಿ: ಹಿಂದೂಯೇತರ ಧಾರ್ಮಿಕ ಆಚರಣೆಗಳನ್ನು ಅನುಸರಿಸಿದ 18 ಸಿಬ್ಬಂದಿ ವಿರುದ್ಧ ಕ್ರಮ..! ಇಲ್ಲಿದೆ ಸಂಪೂರ್ಣ ಮಾಹಿತಿ

0

ನ್ಯೂಸ್ ನಾಟೌಟ್: ತಿರುಮಲ ತಿರುಪತಿಯಲ್ಲಿ ಕೆಲಸ ಮಾಡುವ ವೇಳೆ ಹಿಂದೂಯೇತರ ಧಾರ್ಮಿಕ ಆಚರಣೆಗಳನ್ನು ಅನುಸರಿಸುತ್ತಿರುವ 18 ಮಂದಿ ಸಿಬ್ಬಂದಿ ವಿರುದ್ಧ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

‘ಟಿಟಿಡಿ ಉತ್ಸವಗಳು ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರ ಜತೆಗೆ ಹಿಂದೂಯೇತರ ಧಾರ್ಮಿಕ ಆಚರಣೆಗಳಲ್ಲಿ ಭಾಗವಹಿಸುತ್ತಿದ್ದ 18 ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕ್ಕೆ ಆದೇಶ ಹೊರಡಿಸಲಾಗಿದೆ. ತನ್ನ ದೇವಾಲಯಗಳು ಮತ್ತು ಧಾರ್ಮಿಕ ಚಟುವಟಿಕೆಗಳ ಆಧ್ಯಾತ್ಮಿಕ ಪಾವಿತ್ರ್ಯತೆಯನ್ನು ಕಾಪಾಡುವುದು ಟಿಟಿಡಿಯ ಬದ್ಧತೆಯಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.

ತಿರುಮಲದಲ್ಲಿ ಕೆಲಸ ಮಾಡುವ ಹಿಂದೂಯೇತರ ಸಿಬ್ಬಂದಿಯ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕೆಂದು ಕೋರಿ ಆಂಧ್ರಪ್ರದೇಶ ಸರ್ಕಾರಕ್ಕೆ ಟಿಟಿಡಿ ಮಂಡಳಿ ಇತ್ತೀಚೆಗೆ ಪತ್ರ ಬರೆದಿತ್ತು. ‘ತಿರುಮಲದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಹಿಂದೂಗಳೇ ಆಗಿರಬೇಕು. ಟಿಟಿಡಿಯು ಹಿಂದೂ ದತ್ತಿ ಸಂಸ್ಥೆಯಾಗಿರುವುದರಿಂದ ಹಿಂದೂಯೇತರರು ಸಿಬ್ಬಂದಿಯಾಗಿ ಮುಂದುವರಿಯಲು ಅವಕಾಶ ನೀಡುವುದಿಲ್ಲ’ ಎಂದು ಟಿಟಿಡಿ ಮಂಡಳಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಬಿ.ಆರ್‌.ನಾಯ್ಡು ಈ ಹಿಂದೆ ಘೋಷಿಸಿದ್ದರು.

‘ಇತರ ಧರ್ಮಕ್ಕೆ ಸೇರಿದ ಸಿಬ್ಬಂದಿಯನ್ನು ಸರ್ಕಾರದ ಇತರ ಇಲಾಖೆಗಳಿಗೆ ನಿಯುಕ್ತಿಗೊಳಿಸುವ ಅಥವಾ ಸ್ವಯಂ ನಿವೃತ್ತಿಗೆ (ವಿಆರ್‌ಎಸ್‌) ಅವಕಾಶ ಕಲ್ಪಿಸುವ ಕುರಿತು ಸಮಾಲೋಚನೆ ನಡೆಸಲಾಗುವುದು’ ಎಂದಿದ್ದರು. ‘ತಿರುಮಲದಲ್ಲಿ ಯಾವುದೇ ರೀತಿಯ ರಾಜಕೀಯ ಹೇಳಿಕೆಗಳಿಗೆ ಅವಕಾಶ ನೀಡುವುದಿಲ್ಲ. ಅಂತಹ ವ್ಯಕ್ತಿಗಳು ಮತ್ತು ರಾಜಕೀಯ ಪಕ್ಷಗಳ ಪರ ಪ್ರಚಾರ ಮಾಡುವವರ ವಿರುದ್ಧ ಅಗತ್ಯಬಿದ್ದರೆ ಕಾನೂನುಬದ್ಧವಾಗಿ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ನಾಯ್ಡು ಹೇಳಿಕೆ ನೀಡಿದ್ದರು.

Related Articles

Latestಕ್ರೈಂದೇಶ-ಪ್ರಪಂಚದೇಶ-ವಿದೇಶರಾಜ್ಯ

ತಲೆಗೆ ಗುಂಡು ತಗುಲಿ ಕರ್ನಾಟಕ ಮೂಲದ ಯೋಧ ಸಾವು..! ‘ಮಿಸ್‌ಫೈರ್‌’ ಎಂದ ಸೇನಾಧಿಕಾರಿ..!

ನ್ಯೂಸ್‌ ನಾಟೌಟ್: ಬೆಳಗಾವಿಯ ಮೂಡಲಗಿ ತಾಲೂನಿನ ಕಲ್ಲೋಳಿಯ ಯೋಧ ಪ್ರವೀಣ ಸುಭಾಷ ಖಾನಗೌಡ್ರ (24) ಬುಧವಾರ...

Latestಕ್ರೈಂದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಅತಿಯಾದ ಸಾಲ ಮಾಡಿದ್ದ ಕುಡುಕ ಗಂಡ..! ಸಾಲ ವಸೂಲಿಗೆ ಬರ್ತಿದ್ದ ಯುವಕನನ್ನೇ ಮದುವೆಯಾದ ಮಹಿಳೆ..!

ನ್ಯೂಸ್‌ ನಾಟೌಟ್: ಗಂಡನ ಅತಿಯಾದ ಮದ್ಯಪಾನದ ಚಟದಿಂದ ಬೇಸತ್ತಿದ್ದ ಪತ್ನಿ, ಆತನ ಸಾಲ ವಸೂಲಿಗೆ ಬರುತ್ತಿದ್ದ...

Latestದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಆಂಧ್ರದ ಓಂಗೋಲ್ ತಳಿಯ ಹಸು ಬ್ರೆಜಿಲ್‌ ನಲ್ಲಿ 41 ಕೋಟಿಗೆ ಹರಾಜು..! ಜಗತ್ತಿನ ಅತೀ ದುಬಾರಿ ಹಸು..!

ನ್ಯೂಸ್‌ ನಾಟೌಟ್: ಆಂಧ್ರಪ್ರದೇಶದ ಓಂಗೋಲ್ ತಳಿಯ ಹಸು, ಬ್ರೆಜಿಲ್‌ ನಲ್ಲಿ 41 ಕೋಟಿಗೆ ಹರಾಜಾಗಿದೆ. ಇದೀಗ...

Latestಕ್ರೈಂವೈರಲ್ ನ್ಯೂಸ್ಸಾಧಕರ ವೇದಿಕೆ

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ನಿಧನ..! ‘ಸುಕ್ರಜ್ಜಿ’ ಎಂದೇ ಖ್ಯಾತರಾಗಿದ್ದ ಜನಪದ ಹಾಡುಗಾರ್ತಿ

ನ್ಯೂಸ್‌ ನಾಟೌಟ್: ಜನಪದ ಹಾಡುಗಾರ್ತಿ, ಮದ್ಯಪಾನ ವಿರೋಧಿ ಹೋರಾಟದ ಮೂಲಕ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತೆ ಸುಕ್ರಿ...

@2025 – News Not Out. All Rights Reserved. Designed and Developed by

Whirl Designs Logo