Latestದಕ್ಷಿಣ ಕನ್ನಡಶಿಕ್ಷಣ

ಇಂದು(ಮಾ.24) ನಡೆದ SSLC ಗಣಿತ ಪರೀಕ್ಷೆಗೆ ದ.ಕ ದಲ್ಲಿ 233 ಮಕ್ಕಳು ಗೈರು..! ಇಲ್ಲಿದೆ ಸಂಪೂರ್ಣ ಮಾಹಿತಿ

766

ನ್ಯೂಸ್‌ ನಾಟೌಟ್: ಎಸೆಸೆಲ್ಸಿ ಪರೀಕ್ಷೆಯ ಎರಡನೇ ದಿನವಾದ ಸೋಮವಾರ(ಮಾ.24) ಗಣಿತ ಪರೀಕ್ಷೆ ನಡೆದಿದ್ದು, ದಕ್ಷಿಣ ಕನ್ನಡದಲ್ಲಿ 233 ಮಕ್ಕಳು ಗೈರು ಹಾಜರಾಗಿದ್ದಾರೆ ಎಂದು ವರದಿ ತಿಳಿಸಿದೆ.

ದ.ಕ. ಜಿಲ್ಲೆಯಲ್ಲಿ ಗಣಿತ ಪರೀಕ್ಷೆಗೆ ಕನ್ನಡ ಮಾಧ್ಯಮದಿಂದ 13,706 ಹಾಗೂ ಆಂಗ್ಲ ಮಾಧ್ಯಮದಲ್ಲಿ 15290 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಕನ್ನಡ ಮಾಧ್ಯಮದ 13496 ಹಾಗೂ ಆಂಗ್ಲ ಮಾಧ್ಯಮದ 15248 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಎಸೆಸೆಲ್ಸಿಯಲ್ಲಿ ಗಣಿತ ಹಾಗೂ ವಿಜ್ಞಾನ ಪರೀಕ್ಷೆಯನ್ನು ಎದುರಿಸಲಾದ ವಿಶೇಷ ಚೇತನರಿಗೆ (ಮುಖ್ಯವಾಗಿ ಅಂಧರು) ಗಣಿತ ಬದಲು ಸಮಾಜಶಾಸ್ತ್ರ ಹಾಗೂ ವಿಜ್ಞಾನ ಪರೀಕ್ಷೆಯ ಬದಲು ರಾಜಕೀಯ ಶಾಸ್ತ್ರ ಪರೀಕ್ಷೆಯನ್ನು ಬರೆಯಲು ಅವಕಾಶ ಕಲ್ಪಿಸಲಾಗುತ್ತದೆ.

ಅದರಂತೆ ಕನ್ನಡ ಮಾಧ್ಯಮದಲ್ಲಿ ದ.ಕ. ಜಿಲ್ಲೆಯಲ್ಲಿ ಸಮಾಜ ಶಾಸ್ತ್ರ ಪರೀಕ್ಷೆಗೆ 13 ಹಾಗೂ ಆಂಗ್ಲ ಮಾಧ್ಯಮದಲ್ಲಿ ಇಬ್ಬರು ನೋಂದಾಯಿಸಿಕೊಂಡಿದ್ದರು. ಅವರಲ್ಲಿ ಆಂಗ್ಲ ಮಾಧ್ಯಮದಲ್ಲಿ 12 ಮಂದಿ ಪರೀಕ್ಷೆ ಬರೆದಿದ್ದು, ಒಬ್ಬರು ಗೈರಾಗಿದ್ದಾರೆ. ಈ ಮೂಲಕ ಇಂದು ನಡೆದ ಪರೀಕ್ಷೆಯಲ್ಲಿ ನೋಂದಾಯಿಸಿಕೊಂಡಿದ್ದವರಲ್ಲಿ ಒಟ್ಟು 234 ಮಂದಿ ಗೈರಾಗಿದ್ದರು.  

ಇದನ್ನೂ ಓದಿ2000 ಹೊಸ KSRTC ಬಸ್ ಖರೀದಿಗೆ ಮುಂದಾದ ಸಾರಿಗೆ ಇಲಾಖೆ, ಉಚಿತ ಪ್ರಯಾಣಿಕರ ಸಂಖ್ಯೆ ಲಕ್ಷಗಳಿಂದ ಕೋಟಿಗೆ ದಾಟಿದೆ ಎಂದ ಸಾರಿಗೆ ಸಚಿವ..!

See also  ಧರ್ಮಸ್ಥಳ ಮೂಲದ ಏರೋಸ್ಪೇಸ್ ಎಂಜಿನಿಯರ್ ನಿಗೂಢ ಸಾವಿನ ಬಗ್ಗೆ ಪಂಜಾಬ್ ಸಿಎಂಗೆ ಪತ್ರ ಬರೆದ ಕುಟುಂಬಸ್ಥರು..! ಆಕೆಯ ಪೋಷಕರ ಅನುಮಾನಗಳೇನು..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget