Latestಕ್ರೈಂರಾಜಕೀಯ

ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿತ..! ಅದರೊಳಗೆ ದುಡಿಯುತ್ತಿದ್ದ 6 ಕಾರ್ಮಿಕರು ಸಿಲುಕಿರುವ ಶಂಕೆ..!

680

ನ್ಯೂಸ್ ನಾಟೌಟ್: ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸುರಂಗದ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿಯಲ್ಲಿ ಕನಿಷ್ಠ 6 ಮಂದಿ ಕಾರ್ಮಿಕರು ಸಿಲುಕಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಶ್ರೀಶೈಲಂ ಅಣೆಕಟ್ಟಿನ ಹಿಂಭಾಗದ ಸುರಂಗದ ಒಳಗೆ ಸೋರಿಕೆಯನ್ನು ಸರಿಪಡಿಸಲು ಕಾರ್ಮಿಕರು ತೆರಳಿದ್ದಾಗ, ಸುರಂಗದ ಒಂದು ಭಾಗ ಕುಸಿದಿದೆ. ಈ ವೇಳೆ ಮೂವರು ಕಾರ್ಮಿಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕನಿಷ್ಠ ಆರು ಮಂದಿ ಸುರಂಗದ ಒಳಗೆ ಸಿಲುಕಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.

ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಇತರ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದ್ದಾರೆ.

See also  ಮೂಡುಬಿದಿರೆ: ಹಾಡಹಗಲೇ ಎರಡು ಮನೆಗಳಿಗೆ ನುಗ್ಗಿ ಚಿನ್ನಾಭರಣ, ನಗದು ಕಳವು
  Ad Widget   Ad Widget   Ad Widget   Ad Widget   Ad Widget   Ad Widget   Ad Widget