ಬೆಂಗಳೂರು

ಕೆರೆಯಲ್ಲಿ ಈಜಲು ಹೋಗಿ ಇಬ್ಬರು SSLC ವಿದ್ಯಾರ್ಥಿಗಳು ಮೃತ್ಯು,ಘಟನೆ ನಡೆದಿದ್ದೇಗೆ?

145

ನ್ಯೂಸ್‌ ನಾಟೌಟ್‌ : ಕೆರೆಗೆ ಈಜಲೆಂದು ತೆರಳಿದ ಎಸ್‌ ಎಸ್‌ ಎಲ್‌ ಸಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಮೃತ ಪಟ್ಟಿರುವ ಘಟನೆ ಬಗ್ಗೆ ವರದಿಯಾಗಿದೆ.ಬೆಂಗಳೂರಿನ ಆಗರ ಕೆರೆಯಲ್ಲಿ ಈ ಘಟನೆ ನಡೆದಿದೆ.

ಒಟ್ಟು 11 ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಆಗರ ಕೆರೆಯಲ್ಲಿ ಈಜಲು ಹೋಗಿದ್ದರು. ಇವರೆಲ್ಲ ಕೆಂಗೇರಿ ಉಪನಗರ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಈಜಲು ನೀರಿಗೆ ಇಳಿದಿದ್ದ ಇಬ್ಬರು ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪೃಥ್ವಿರಾಜ್, ನವೀನ್ ಮೃತ ವಿದ್ಯಾರ್ಥಿಗಳು. ಇಬ್ಬರು ಹುಡುಗರು ದೊಡ್ಡಬೆಲೆ ಮೂಲದವರು ಎನ್ನಲಾಗಿದೆ. ದುರ್ಘಟನಾ ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದಾರೆ. ಮೃತ ದೇಹಗಳನ್ನು ಕೆರೆಯಿಂದ ಹೊರತೆಗೆದು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

See also  ಎಟಿಎಂ ಕಳ್ಳತನ ವಿಫಲವಾದದ್ದೇಗೆ..? ಕಳ್ಳತದ ವೇಳೆ 7 ಲಕ್ಷ ರೂ. ಬೆಂಕಿಗಾಹುತಿಯಾದದ್ದೇಗೆ..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget