Latestಕರಾವಳಿಕೊಡಗು

ಮಡಿಕೇರಿ : ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ಮೃತ್ಯು,ಏನಿದು ಘಟನೆ

823

ನ್ಯೂಸ್ ನಾಟೌಟ್: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ 8 ಜನ ಯುವಕರ ಪೈಕಿ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಬಗ್ಗೆ ವರದಿಯಾಗಿದೆ. ಮಡಿಕೇರಿ ತಾಲೂಕಿನ ನಾಪೊಕ್ಲು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ಈ ದುರ್ಘಟನೆ ನಡೆದಿದೆ.ಚೇರಂಬಾಣೆ ಮೂಲದ ಗಿರೀಶ್ (16) ಮತ್ತು ಅಯ್ಯಪ್ಪ (18) ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರೆಂದು ತಿಳಿದು ಬಂದಿದೆ.

ಇಬ್ಬರ ಪೈಕಿ ಓರ್ವನ ಮೃತದೇಹ ದೊರಕಿದ್ದು,ಇನ್ನೋರ್ವನ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ನಾಪೊಕ್ಲು ಪಿಎಸ್ ಐ ಮಂಜುನಾಥ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

See also  ಒಂದು ರೂಪಾಯಿ ನೋಟು ಕೊಟ್ಟು ಹತ್ತು ಲಕ್ಷ ರೂ. ಕಳೆದುಕೊಂಡ ವ್ಯಕ್ತಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget