ಉಡುಪಿ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಉಡುಪಿಯ ಉಚ್ಚಿಲ ಸಮೀಪದ ಮುಳೂರಿನಲ್ಲಿ ನಡೆದಿದೆ. ಮೃತಪಟ್ಟ ಸ್ಕೂಟರ್ ಸವಾರರನ್ನು ಪಡುಬಿದ್ರೆ ನಿವಾಸಿ ಚರಣ್ ಶೆಟ್ಟಿ ಎಂದು ಗುರುತಿಸಲಾಗಿದೆ. ಉಡುಪಿಯಿಂದ ಪಡುಬಿದ್ರೆಯತ್ತ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರಿನ ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಲಾದ ಲಾರಿಯ ಹಿಂಬದಿಗೆ ಢಿಕ್ಕಿಯಾಗಿದೆ. ಈ ಪರಿಣಾಮ ಸ್ಕೂಟರ್ ಲಾರಿಯ ಅಡಿಯಲ್ಲಿ ಸಿಲುಕಿದೆ.