ಕರಾವಳಿಕ್ರೈಂವೈರಲ್ ನ್ಯೂಸ್

ಉಡುಪಿ ಹತ್ಯೆ ಪ್ರಕರಣ: ಸಿಎಂ ಸಿದ್ಧುವನ್ನು ಭೇಟಿ ಮಾಡಿದ್ದೇಕೆ ಮುಸ್ಲಿಂ ಒಕ್ಕೂಟ..? ಸಿದ್ಧರಾಮಯ್ಯ ಹೇಳಿದ್ದೇನು?

251

ನ್ಯೂಸ್ ನಾಟೌಟ್: ಉಡುಪಿಯಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ತ್ವರಿತ ವಿಚಾರಣೆ ನಡೆಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಹಾಗೂ ಮುಸ್ಲಿಂ ಜಸ್ಟೀಸ್ ಫೋರಂ ನೇತೃತ್ವದ ನಿಯೋಗ ಇಂದು ಬೆಳಗಾವಿಯಲ್ಲಿ ಮುಖ್ಯ ಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು ಎಮದು ವರದಿ ತಿಳಿಸಿದೆ.

ಉಡುಪಿಯ ಪೊಲೀಸ್ ಇಲಾಖೆ ಮುತುವರ್ಜಿ ವಹಿಸಿ ತ್ವರಿತಗತಿಯಲ್ಲಿ ರಹಸ್ಯವನ್ನು ಬೇಧಿಸಿ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಜಿಲ್ಲೆಯ ಇತಿಹಾಸದಲ್ಲೇ ಇದೊಂದು ಅತ್ಯಂತ ಭಯಾನಕ ಅಪರಾಧ ವಾಗಿದ್ದು, ಜಿಲ್ಲೆಯ ಜನರಲ್ಲಿ ಅಭದ್ರತೆಯ ಭಾವನೆ ಮೂಡಿಸಿದೆ.

ಈ ಕ್ರೂರ ಅಪರಾಧ ಪ್ರಕರಣಕ್ಕೆ ರಾಜ್ಯದ ಘನ ಸರ್ಕಾರವು ನ್ಯಾಯಯುತ ತಾರ್ಕಿಕ ಅಂತ್ಯವನ್ನು ಶೀಘ್ರಗತಿಯಲ್ಲಿ ಕಲ್ಪಿಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವುದು ಅತ್ಯಂತ ಅಗತ್ಯದ ಕರ್ತವ್ಯವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ ಉಲ್ಲೇಖಿಸಲಾಗಿದೆ.

ರಾಜ್ಯ ಸರಕಾರವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ನ್ನು ಕೂಡಲೇ ನೇಮಿಸಬೇಕು. ತ್ವರಿತಗತಿಯಲ್ಲಿ ವಿಚಾರಣೆ ಪೂರ್ಣಗೊಳಿಸಿ ಆರೋಪಿಗೆ ಶಿಕ್ಷೆ ಖಾತ್ರಿ ಪಡಿಸಲು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿದ್ದು, ಈ ಪ್ರಕರಣದಲ್ಲಿ ಆರೋಪಿಯನ್ನು ಸಮಗ್ರವಾಗಿ ವಿಚಾರಣೆ ನಡೆಸಿ ಈ ಕೃತ್ಯದಲ್ಲಿ ಭಾಗಿಯಾದ ಅಥವಾ ಸಹಕರಿಸಿರಬಹುದಾದ ಇತರರನ್ನು ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ರೀತಿಯ ಕೃತ್ಯಗಳು ನಡೆಯದಂತೆ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಆಯಕಟ್ಟಿನ ಜಾಗದಲ್ಲಿ ಸಿಸಿಟಿವಿ ಅಳವಡಿಸಬೇಕು ಎಂದು ನಿಯೋಗ ಮುಖ್ಯಮಂತ್ರಿಯನ್ನು ಒತ್ತಾಯಿಸಿದೆ ಎನ್ನಲಾಗಿದೆ.

ಸಿಎಂ ಆದಷ್ಟು ಶೀಘ್ರ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

See also  ಶಬರಿಮಲೆಗೆ ಹೋದ ಸುಳ್ಯದ ಅಯ್ಯಪ್ಪ ಮಾಲಾಧಾರಿಗಳು ಮಾಡಿದ್ದೇನು?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget