ಉಡುಪಿಕರಾವಳಿಕ್ರೈಂವೈರಲ್ ನ್ಯೂಸ್

ಉಡುಪಿ: ನಾಲ್ವರ ಕಗ್ಗೊಲೆ ಪ್ರಕರಣದ ಆರೋಪಿಗೆ ಜಾಮೀನು ತಿರಸ್ಕರಿಸಿದ ಕೋರ್ಟ್, ಸಾಕ್ಷಿಗಳನ್ನು ಹೆದರಿಸುವ ಸಾಧ್ಯತೆ ಇದೆ ಎಂದ ನ್ಯಾಯಾಲಯ

251

ನ್ಯೂಸ್ ನಾಟೌಟ್: ಉಡುಪಿಯ ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಎರಡನೇ ಬಾರಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿ ಇಂದು(ಮಾ.೩೦) ಆದೇಶ ಮಾಡಿದೆ. ಚೌಗುಲೆ ಮಾ.13ರಂದು ಎರಡನೇ ಬಾರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗೆ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಮಾ.27ರಂದು ಆಕ್ಷೇಪಣೆ ಸಲ್ಲಿಸಿದ್ದರು.

ಈ ಕುರಿತು ಆರೋಪಿ ಪರ ವಕೀಲ ರಾಜೇಶ್ ಹಾಗೂ ವಿಶೇಷ ಸರಕಾರಿ ಅಭಿಯೋಜಕರ ಮಧ್ಯೆ ವಾದ ಪ್ರತಿವಾದಗಳು ನಡೆದವು. ಎರಡು ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಧೀಶ ದಿನೇಶ್ ಹೆಗ್ಡೆ ಜಾಮೀನು ಅರ್ಜಿಯ ಕುರಿತ ಅಂತಿಮ ಆದೇಶವನ್ನು ಮಾ.30ಕ್ಕೆ ನಿಗದಿ ಪಡಿಸಿ ಆದೇಶ ನೀಡಿದ್ದರು. ಇದರ ಪ್ರಕಾರ, ಆರೋಪಿ ಮೇಲಿನ ಆರೋಪಗಳು ಎಫ್ ಎಸ್ ಎಲ್ ವರದಿ ಸೇರಿದಂತೆ ಇನ್ನಿತರ ಸಾಕ್ಷಿಗಳಿಂದ ಮೇಲ್ನೋಟಕ್ಕೆ ಕಂಡು ಬಂದಿದ್ದು ಜಾಮೀನು ನೀಡಿದರೆ ಸಾಕ್ಷಿಗಳನ್ನು ಹೆದರಿಸುವ ಸಾಧ್ಯತೆ ಇದೆ. ನ್ಯಾಯಾಂಗ ಬಂಧನದಲ್ಲೂ ಆರೋಪಿಗೆ ಚಿಕಿತ್ಸೆ ಪಡೆಯುವ ಅವಕಾಶ ಇರುವುದರಿಂದ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವುದಾಗಿ ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

See also  ಅಂಬಾನಿ ಕುಟುಂಬ ಈಕೆಗೆ ನೀಡಿದ ಸಂಭಾವನೆ ಎಷ್ಟು ಕೋಟಿ ಗೊತ್ತಾ..? ಈಕೆ ಧರಿಸಿದ್ದ 7 ಲಕ್ಷ ರೂಪಾಯಿಯ ಈ ಹೆಡ್ ಫೋನ್ ನಲ್ಲಿ ಅಂತದ್ದೇನಿದೆ..?
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget