ಕರಾವಳಿ

ಉಡುಪಿ: ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾ ಕುಮಾರಿ ಅಧಿಕಾರ ಸ್ವೀಕಾರ

195

ನ್ಯೂಸ್‌ ನಾಟೌಟ್‌: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾ ಕುಮಾರಿ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಅಧಿಕಾರ ಹಸ್ತಾಂತರ ಮಾಡಿದರು.

ಡಾ. ವಿದ್ಯಾಕುಮಾರಿ ಅವರು ಪ್ರಸ್ತುತ ತುಮಕೂರು ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಅವರು ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ವಿದ್ಯಾಕುಮಾರಿ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರು. 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ ಆಗಿದ್ದಾರೆ.

See also  ಹಾಸನದಲ್ಲಿ ಶಾರ್ಪ್ ಶೂಟರ್ ವೆಂಕಟೇಶ್ ದುರಂತ ಅಂತ್ಯದ ಬಳಿಕ ಭೀಮನ ಪರಿಸ್ಥಿತಿ ಹೇಗಿದೆ? ಸ್ಥಳೀಯರು ಸೋಶಿಯಲ್ ಮೀಡಿಯಾ ಅಭಿಯಾನ ನಡೆಸಿ ಹೇಳಿದ್ದೇನು?
  Ad Widget   Ad Widget   Ad Widget   Ad Widget   Ad Widget   Ad Widget   Ad Widget