ನ್ಯೂಸ್ ನಾಟೌಟ್ : ಸಾಮಾಜಿಕ ಜಾಲತಾಣಗಳಲ್ಲಿ ಕೋಮುಗಲಭೆ ಉಂಟು ಮಾಡಲು ಪ್ರೇರೆಪಿಸುವಂತಹ ಪೋಸ್ಟ್ ಹಾಕಿದ ಆರೋಪದಲ್ಲಿ ಹಿಂದೂ ಜಾಗರಣ ವೇದಿಕೆಯ ಮುಖಂಡನನ್ನು ಅಜೆಕಾರು ಪೊಲೀಸರು ಬಂಧಿಸಿದ್ದಾರೆ.
ಮರ್ಣೆ ಗ್ರಾಮದ ಅಜೆಕಾರು ನಿವಾಸಿ ರತ್ನಾಕರ ಅಮೀನ್ ಬಂಧಿತ ಹಿಂದೂ ಜಾಗರಣ ವೇದಿಕೆ ಮುಖಂಡ ಎಂದು ಗುರುತಿಸಲಾಗಿದೆ.
ಫೇಸ್ ಬುಕ್ ಪೇಜ್ ನಲ್ಲಿ ಜಾತಿ ಮತ್ತು ಧರ್ಮಗಳ ನಡುವೆ ವೈರುತ್ವ ಮತ್ತು ಕೋಮುಗಲಭೆ ಉಂಟು ಮಾಡಲು ಪ್ರೇರೆಪಿಸುವಂತಹ ಪೋಸ್ಟ್ ಮಾಡಿದ್ದರು ಎಂದು ಆರೋಪಿಸಲಾಗಿದೆ, ಅಜೆಕಾರು ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಅದರಂತೆ ಆರೋಪಿ ರತ್ನಾಕರ ಅಮೀನ್ ನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.