ಕರಾವಳಿ

ಹೆದ್ದಾರಿಯಲ್ಲಿ ಮರದ ದಿಮ್ಮಿಯೇರಿ ಕಾರುಬಾರು

362

ನ್ಯೂಸ್ ನಾಟೌಟ್: ಸಾಮಾನ್ಯವಾಗಿ ಕಾರುಗಳು ರಸ್ತೆಯಲ್ಲಿ ಚಲಿಸುವುದನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಕಾರು ಅತಿ ವೇಗದಲ್ಲಿ ಬಂದು ನಿಯಂತ್ರಣ ಕಳೆದುಕೊಂಡು ರಸ್ತೆಯ ಇಕ್ಕೆಲೆಗಳಲ್ಲಿ ಸಾಗಿ ಮರದ ದಿಮ್ಮಿಯೇರಿ ನಿಂತ ಘಟನೆ ಉಪ್ಪಿನಂಗಡಿಯಿಂದ ವರದಿಯಾಗಿದೆ.

ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಭಾನುವಾರ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಬದಿಯ ಮರದ ದಿಮ್ಮಿಯನ್ನೇರಿದೆ. ಮಂಗಳೂರಿನಿಂದ ಬೆಂಗಳೂರಿನತ್ತ ಸಂಚರಿಸುತ್ತಿದ್ದ ಈ ಕಾರು ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅತಿಯಾದ ವೇಗದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

See also  ಸೆಲೆಬ್ರಿಟಿಗಳಿಗೆ ಟ್ವಿಟ್ಟರ್ ಶಾಕ್! ರಾತ್ರೋ ರಾತ್ರಿ ಬ್ಲೂಟಿಕ್ ಮಾಯ!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget