ಕ್ರೈಂ

ಉಪ್ಪಿನಂಗಡಿ: ಹಿಂದೂ ಕಾರ್ಯಕರ್ತನಿಗೆ ಚೂರಿ ಇರಿತ, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ, ಪರಿಸ್ಥಿತಿ ಗಂಭೀರ

748

ಉಪ್ಪಿನಂಗಡಿ : ಇಲ್ಲಿನ ಸಮೀಪದ ಹಳೇ ಗೇಟು ಎಂಬಲ್ಲಿ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತನ ಮೇಲೆ ಮುಸುಕುದಾರಿಗಳ ತಂಡವೊಂದು ದಾಳಿ ನಡೆಸಿ‌ ಚೂರಿ ಇರಿದ ಘಟನೆ ಇಂದು ಸಂಜೆ ನಡೆದಿರುವ ಬಗ್ಗೆ ವರದಿಯಾಗಿದೆ. ಉಪ್ಪಿನಂಗಡಿ ಕಜೆಕಾರು ನಿವಾಸಿ ಅಶೋಕ್‌ ಶೆಟ್ಟಿ ಹಲ್ಲೆಗೊಳಗಾದ ವ್ಯಕ್ತಿ.

ಉಪ್ಪಿನಂಗಡಿಯ ಹಳೇ ಗೇಟು ಬಳಿ ಮೀನಿನ ವ್ಯಾಪಾರ ನಡೆಸುವ ಇವರು ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಎಂದು ಹೇಳಲಾಗುತ್ತಿದ್ದು,ಗಂಭೀರ ಗಾಯಗೊಂಡಿರುವ ಅವರಿಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಸ್ಥಳೀಯ ಮಾಹಿತಿಗಳ ಪ್ರಕಾರ ಮುಸುಕುಧಾರಿಗಳ ತಂಡವೊಂದು ಈ ಕೃತ್ಯ ಎಸಗಿರುವುದಾಗಿ ಹೇಳಲಾಗುತ್ತಿದೆ. ಅಂಗಡಿ ಬಳಿ ನಿಂತಿದ್ದ ಆಶೋಕ್‌ ಮೇಲೆ ಏರಿ ಬಂದ ದುಷ್ಕರ್ಮಿಗಳ ತಂಡ ಏಕಾಏಕಿ ಚೂರಿಯಲ್ಲಿ ಇರಿದು ಪರಾರಿಯಾಗಿದೆ ಎಂದು ಹೇಳಲಾಗುತ್ತಿದೆ.

See also  ಹುಟ್ಟೂರಿನಲ್ಲೇ ಕಿರುತೆರೆ ನಟಿ ಶೋಭಿತಾ ಮೃತದೇಹದ ಅಂತಿಮ ದರ್ಶನಕ್ಕೆ ವ್ಯವಸ್ಥೆ, ಇಂದೇ(ಡಿ.3) ಅಂತ್ಯಕ್ರಿಯೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget