ನ್ಯೂಸ್ ನಾಟೌಟ್: ಗ್ಯಾಸ್ ಟ್ಯಾಂಕರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಗಡ್ಡವಾಗಿ ಮಗುಚಿ ಬಿದ್ದ ಘಟನೆ ಬಗ್ಗೆ( ಮೇ ೨೧) ವರದಿಯಾಗಿದೆ. ಉಪ್ಪಿನಂಗಡಿ ಸಮೀಪದ ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ಘಟನೆ ನಡೆದಿದ್ದು, ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆಂದು ತಿಳಿದು ಬಂದಿದೆ. ಗಾಯಾಳು ಚಾಲಕನನ್ನು ಬಬ್ಲಿ ಯಾದವ್ ಎಂದು ಗುರುತಿಸಲಾಗಿದೆ.
ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಘಟನೆಯಿಂದ ಯಾವುದೇ ಅನಿಲ ಸೋರಿಕೆಯಾಗದ ಕಾರಣ ಹೆದ್ದಾರಿಯಲ್ಲಿನ ವಾಹನ ಸಂಚಾರಕ್ಕೆ ಯಾವುದೇ ಅಡೆತಡೆಯುಂಟಾಗಿಲ್ಲ ಎಂದು ತಿಳಿದು ಬಂದಿದೆ. ಶಿರಾಡಿ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಇದು ಮೂರನೇ ಅಪಘಾತವಾಗಿದೆ ಅನ್ನೋದು ವಿಪರ್ಯಾಸ ಸಂಗತಿ.