ಕರಾವಳಿಕ್ರೈಂವಿಡಿಯೋವೈರಲ್ ನ್ಯೂಸ್

ಉಪ್ಪಿನಂಗಡಿ: ಬಜರಂಗದಳ ಮುಖಂಡರಿಂದ ಹಲ್ಲೆ..! ಅಂಗಡಿಯಿಂದ ಹೊರಗೆಳೆದು ನಡುರಸ್ತೆಯಲ್ಲಿ ವ್ಯಕ್ತಿಯ ಹಲ್ಲೆಗೆ ಕಾರಣವೇನು? ಇಲ್ಲಿದೆ ಸಿಸಿಟಿವಿ ದೃಶ್ಯ

176

ನ್ಯೂಸ್ ನಾಟೌಟ್ : ಬಜರಂಗದಳ ಮುಖಂಡ ಮತ್ತು ತಂಡದಿಂದ ನಡುರಸ್ತೆಯಲ್ಲಿ ಅಂಗಡಿಗೆ ನುಗ್ಗಿ ಹಲ್ಲೆಗೈದು ಗೂಂಡಾಗಿರಿ ಮಾಡಿದ ಘಟನೆ ದ.ಕ. ಜಿಲ್ಲೆಯ ಉಪ್ಪಿನಂಗಡಿ ಪೇಟೆಯಲ್ಲಿ ವರದಿಯಾಗಿದೆ.

ಜಾಗದ ವಿಚಾರದಲ್ಲಿ ತಕರಾರು ಈ ಜಗಳಕ್ಕೆ ಕಾರಣ ಎನ್ನಲಾಗಿದ್ದು, ಬಜರಂಗದಳ ಮುಖಂಡ ಮತ್ತು ತಂಡ ಅಂಗಡಿಗೆ ನುಗ್ಗಿ ನಾಲ್ವರ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.

ಅಂಗಡಿಯಿಂದ ಹೊರಗೆಳೆದು ನಡುರಸ್ತೆಯಲ್ಲಿ ವ್ಯಕ್ತಿಗೆ ಹಲ್ಲೆಗೈದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಬಜರಂಗದಳ ಮುಖಂಡ ಮತ್ತು ರೌಡಿಶೀಟರ್ ಭರತ್ ಕುಮ್ಡೇಲು ಮತ್ತು ತಂಡ ಈ ಕೃತ್ಯ ಎಸಗಿದೆ ಎಂದು ಮೂಲಗಳು ತಿಳಿಸಿವೆ.

ಹರೀಶ ನಾಯ್ಕ, ಸುದರ್ಶನ್ ಕುಮಾರ್, ರಮಾನಂದ ಎಂಬವರ ಮೇಲೆ ಹಲ್ಲೆ ನಡೆದಿದ್ದು, ಬಜರಂಗದಳದ ಜಗಜೀವನ್ ರೈ, ಭವಿಷ್, ಸಂದೀಪ್ ಎಂಬವರು ಭರತ್ ಕುಮ್ಡೇಲು ಜೊತೆ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

2017ರಲ್ಲಿ ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಕೊಲೆ ಪ್ರಕರಣದ ಆರೋಪಿಯಾಗಿದ್ದ ಭರತ್ ಕುಮ್ಡೇಲು ಕಲ್ಲಡ್ಕದ ಬಜರಂಗದಳ ಮುಖಂಡನಾಗಿದ್ದು ಬಂಟ್ವಾಳದಲ್ಲಿ ರೌಡಿ ಶೀಟರ್ ಎನ್ನಲಾಗಿದೆ.ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಸ್ಸಿ- ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತದ್ದಾರೆ.

See also  ಅಕ್ಟೋಬರ್‌ನಲ್ಲಿ ಸುಳ್ಯದಲ್ಲಿ ನಡೆಯಲಿರುವ ಮಹಿಳಾ ಸಮಾವೇಶದ ಉದ್ದೇಶವೇನು?,ಪ್ರಧಾನಿಗೆ ಅಭಿನಂದನೆ ಸಲ್ಲಿಸಿ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಹೇಳಿದ್ದೇನು?ಇಲ್ಲಿದೆ ಡಿಟೇಲ್ಸ್ ..
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget