ಉಡುಪಿಉಪ್ಪಿನಂಗಡಿಕರಾವಳಿಕ್ರೈಂದಕ್ಷಿಣ ಕನ್ನಡವೈರಲ್ ನ್ಯೂಸ್

ಉಡುಪಿಯ ಗರುಡ ಗ್ಯಾಂಗ್ ಗೆ ಹಣಕಾಸಿನ ನೆರವು ನೀಡಿದ್ದ ಉಪ್ಪಿನಂಗಡಿಯ ಮಹಿಳೆ..! ಆಕೆಯನ್ನು ಬಂಧಿಸಿ ಮಂಗಳೂರಿನ ಕಾರಾಗೃಹದಲ್ಲಿ ಇರಿಸಿದ ಪೊಲೀಸರು..!

160

ನ್ಯೂಸ್ ನಾಟೌಟ್: ಉಡುಪಿಯ ಕಾಪುವಿನಲ್ಲಿ ರೌಡಿ ಶೀಟರ್ ಗಳಾಗಿ ಗುರುತಿಸಿಕೊಂಡಿರುವ ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ಕಾರಣಕ್ಕೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ನಂಟಿದ್ದ ಕಾರಣ ಮಹಿಳೆಯೊಬ್ಬಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು, ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ ಸಫಾರ ಯಾನೆ ಸಾಜಿದ (21) ಎಂದು ಗುರುತಿಸಲಾಗಿದೆ. ಗರುಡ ಗ್ಯಾಂಗ್‌ ಸದಸ್ಯರಿಗೆ ಸಫಾರ ಆರ್ಥಿಕ ನೆರವು ಮತ್ತು ಆಶ್ರಯ ವ್ಯವಸ್ಥೆ ಮಾಡಿದ್ದಳು.

ಗ್ಯಾಂಗ್ ಸದಸ್ಯರಿಗೆ ಮೊಬೈಲ್‌ ಫೋನ್ ನೀಡಿ ಹಣ ವರ್ಗಾವಣೆ ಮಾಡಿರುವ ಆರೋಪವೂ ಸಫಾರ ಯಾನೆ ಸಾಜಿದ ಮೇಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಈಕೆಯನ್ನು ವಿಚಾರಣಾಧೀನ ಕೈದಿಯಾಗಿ ಮಂಗಳೂರಿನ ಕಾರಾಗೃಹದಲ್ಲಿ ಇರಿಸಲಾಗಿದೆ ಎಂದು ವರದಿ ತಿಳಿಸಿದೆ.

Click 👇

https://newsnotout.com/2024/07/boy-touches-ibx-wire-kannada-news-19-year-old-nomore
https://newsnotout.com/2024/07/babbu-swami-daiva-kannada-news-theft-kannada-news-tulunadu
https://newsnotout.com/2024/07/elephant-no-more-viral-video-due-to-rail-collision-kannda-news-assam
https://newsnotout.com/2024/07/forest-department-kannada-news-elephant-issue-in-deserve-forest-area
https://newsnotout.com/2024/07/kmf-kananda-news-election-for-congress-and-bjp-kannada-news
See also  ಅಡ್ಕಾರು: ಬೈಕ್ ಸ್ಕಿಡ್ ಆಗಿ ಅಪಘಾತ, ರಸ್ತೆಯ ಕಲ್ಲಿಗೆ ಬಡಿದ ಯುವಕನ ಮುಖಕ್ಕೆ ಗಂಭೀರ ಗಾಯ
  Ad Widget   Ad Widget   Ad Widget   Ad Widget   Ad Widget   Ad Widget   Ad Widget