ಕ್ರೈಂ

ಪುತ್ತೂರು: ಬಿಜೆಪಿಯ ಭೀಷ್ಮ ಉರಿಮಜಲು ಕೆ. ರಾಮ ಭಟ್ ಇನ್ನಿಲ್ಲ

676

ಪುತ್ತೂರು: ದ.ಕ ಜಿಲ್ಲಾ  `ಬಿಜೆಪಿಯ ಭೀಷ್ಮ’ ಎಂದೇ  ಕರೆಸಿಕೊಳ್ಳುತ್ತಿದ್ದ  ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ. ರಾಮ ಭಟ್ (92 ) ರವರು ಅಲ್ಪಕಾಲದ ಅಸ್ವಸ್ತತೆಯಿಂದ ಇಂದು ಸಂಜೆ ಇಹಲೋಕ ತ್ಯಜಿಸಿದರು  ಆರೋಗ್ಯದಲ್ಲಿ ಏರುಪೇರು ಆಗಿರುವ ನಿಟ್ಟಿನಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಯೋ ಸಹಜ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು  ಕೆಲವು ತಿಂಗಳುಗಳ  ಹಿಂದೆಯಷ್ಟೇ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚೇತರಿಸಿಕೊಂಡಿದ್ದ ರಾಮ ಭಟ್ ರವರನ್ನು ಕೊಂಬೆಟ್ಟಿನಲ್ಲಿರುವ ಅವರ ಮನೆಗೆ ಕರೆ ತರಲಾಗಿತ್ತು. ಮತ್ತೆ ಅವರ ಆರೋಗ್ಯ ಹದಗೆಟ್ಟಿರುವ ಹಿನ್ನೆಲೆಯಲ್ಲಿ  ಪುತ್ತೂರಿನ  ಆಸ್ಪತ್ರೆಗೆ ದಾಖಲಿಸಲಾಗಿತ್ತು . ಆದರೆ ಇಂದು ಸಂಜೆ ಮನೆಯಲ್ಲಿಯೇ ಕೊನೆಯುಸಿರೆಳೆದರು.

See also  ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವರನ್ನು ಬಂಧಿಸಲಾಗುವುದು ಎಂದ ಗೃಹಸಚಿವ..! ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget     Ad Widget   Ad Widget   Ad Widget   Ad Widget