ಕರಾವಳಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸ್ಯಾಂಡಲ್‌ವುಡ್‌ನ ಕ್ಯೂಟ್ ಕಪಲ್,ನೆಲಭೋಜನ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ ದಂಪತಿ

ನ್ಯೂಸ್ ನಾಟೌಟ್: ಸ್ಯಾಂಡಲ್​​ವುಡ್​​ನ ಕ್ಯೂಟ್​​ ಕಪಲ್ ಎಂದೇ ಕರೆಸಿಕೊಂಡಿರುವ​​ ಸಿಂಹ ಪ್ರಿಯ ದಂಪತಿ ಉಡುಪಿ ಕೃಷ್ಣ ಮಠಕ್ಕೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ನೆಲದ ಮೇಲೆ ಊಟ ಮಾಡಿ ನೆಲಭೋಜನ ಹರಕೆಯ ಸೇವೆಯನ್ನು ತೀರಿಸಿದ್ದಾರೆ.

ಜನವರಿ 26ರಂದು ಗಣರಾಜ್ಯ ದಿನದಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ನಟಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೋಡಿ ಸರಳ ವಿವಾಹದ ಮೂಲಕ ಗಮನ ಸೆಳೆದಿದ್ದರು. ಮೈಸೂರಿನ ಸಚ್ಚಿದಾನಂದ ಆಶ್ರಮದಲ್ಲಿ ಇಬ್ಬರ ಮದುವೆ ಸಮಾರಂಭ ನಡೆದಿತ್ತು.

ಇತ್ತೀಚೆಗಷ್ಟೇ ಈ ಜೋಡಿ ಮಂತ್ರಾಲಯದ ಮಠಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದರು.ಇದೀಗ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದಂಪತಿ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ನೆಲಭೋಜನ ಹರಕೆಯನ್ನು ತೀರಿಸಿದ್ದಾರೆ.

ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿದ  ವಸಿಷ್ಠ ಸಿಂಹ, ಹರಿಪ್ರಿಯಾ ದಂಪತಿ ಕೃಷ್ಣದೇವರ ದರ್ಶನ ಪಡೆದರು. ಮುಖ್ಯಪ್ರಾಣದೇವರ ಸನ್ನಿಧಿಯಲ್ಲಿ ನೆಲಭೋಜನ ಹರಕೆಯ ಸೇವೆಯನ್ನು ತೀರಿಸಿದರು.ಕಲಾವಿದ ಮಧೂರು ನಾರಾಯಣ ಶರಳಾಯ ಉಪಸ್ಥಿತರಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ.

Related posts

ಸಂಪಾಜೆ: ಮಹಿಳೆಯ ಕೈಯಲ್ಲಿದ್ದ 50,000 ರೂ. ಮೌಲ್ಯದ ಚಿನ್ನದ ಬ್ರೆಸ್ಲೈಟ್‌ ಕಾಣೆ, ಹಿಂದಿರುಗಿಸಲು ಮನವಿ

‘ಅಜ್ಜಾವರದ ದಲಿತ ಕಾಲೋನಿಗೆ ಮಾನವೀಯತೆಯಿಂದ ನೀರು ಬಿಡಿ..ಜನಾಡಳಿತ ಇರುವುದೇ ಜನರ ಕಷ್ಟಕ್ಕೆ ಸ್ಪಂದಿಸುವುದಕ್ಕಲ್ಲವೇ..?

ಮಡಿಕೇರಿ: ಬೈಕ್‌ಗಳೆರಡರ ನಡುವೆ ಭೀಕರ ಅಪಘಾತ,ಸವಾರರಿಗೆ ಗಂಭೀರ ಗಾಯ