ಕರಾವಳಿಬೆಂಗಳೂರುವೈರಲ್ ನ್ಯೂಸ್

ಬುರ್ಖಾ ಧರಿಸಿ ಕಾಲಿ ಬಿಂದಿಗೆ ಹಿಡಿದು ಬಂದ ವಾಟಾಳ್ ನಾಗರಾಜ್..! ವಾಟಾಳ್ ವೇಷ ವಿವಾದಕ್ಕೆ ತಿರುಗಲಿದೆಯಾ? ಯಾಕೆ ಈ ಹೊಸಾ ಅವತಾರ?

ನ್ಯೂಸ್ ನಾಟೌಟ್: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕನ್ನಡಪರ, ರೈತ ಸಂಘಟನೆಗಳು ಕರ್ನಾಟಕ ಬಂದ್​​ಗೆ ಕರೆ ನೀಡಿದ್ದು, ಬೆಂಗಳೂರಿನ ಹಲವೆಡೆ ಮತ್ತು ಕೋಲಾರ ಮತ್ತು ಕೆಲವು ಜಿಲ್ಲೆಗಳನ್ನು ಹೊರತು ಪಡಿಸಿ ಹಲವೆಡೆ ಮಿಶ್ರ ಪ್ರತಿಕ್ರಿಯೆ ದೊರೆತಿದೆ.

ಈ ಹಿಂದೆ ಕಾವೇರಿ ವಿಚಾರಕ್ಕೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತ್ರತ್ವದಲ್ಲಿ ನಡೆದ ಬಂದ್ ಯಶಸ್ವಿಯಾಗಿತ್ತು ಮತ್ತು ಈ ಪ್ರತಿಭಟನೆಗೆ ವಾಟಾಳ್ ಪೇಟ ಧರಿಸಿ ಕತ್ತೆಯ ಮೇಲೆ ಕುಳಿತು ಕಾಣಿಸಿಕೊಂಡಿದ್ದರು.

ಆದರೆ ಈ ಭಾರೀ ಕಾವೇರಿ ಹೋರಾಟದಲ್ಲಿ ಬುರ್ಖಾ ಧರಿಸಿ ಕಾಲಿ ಬಿಂದಿಗೆ ತಲೆಯ ಮೇಲೆ ಹಿಡಿದು ಬಂದಿರುವುದು ಎಲ್ಲರ ಗಮನ ಸೆಳೆದಿದೆ ಮತ್ತು ವಿವಾದಕ್ಕೆ ಕಾರಣ ಮಾಡಿಕೊಟ್ಟಿದೆ ಎನ್ನಲಾಗಿದೆ ಈ ಬಗ್ಗೆ ಪರ ವಿರೋಧ ಚರ್ಚೆಗಳು ಜೋರಾಗಿದೆ.

ಈ ಬಂದ್​ಗೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ಬೆಂಬಲ ವ್ಯಕ್ತಪಡಿಸಿವೆ. ಅಲ್ಲದೇ ಬೆಂಗಳೂರಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿದೆ. ಈಗಾಗಲೆ ಪೊಲೀಸರು ಬಂದೋಬಸ್ತ್​​ಗೆ ಫೀಲ್ಡ್​​ಗೆ ಇಳಿದಿದ್ದಾರೆ.

ಟೌನ್​​​ಹಾಲ್​ ಮುಂದೆ ಪ್ರತಿಭಟನೆಗೆ ಅವಕಾಶ ನೀಡದೆ ದೌರ್ಜನ್ಯವೆಸಗಿದ್ದಾರೆ. ರಾಜ್ಯ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ನಾನು ಕಪ್ಪು ಬಟ್ಟೆ ಧರಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದೇನೆ. ನ್ಯಾಯದೇವತೆ ಧರಿಸುವ ಬಟ್ಟೆ ಅಥವಾ ಬುರ್ಖಾ ಎಂದಾದರೂ ಕರೆಯಲಿ. ನ್ಯಾಯದೇವತೆಯ ಸಂದೇಶ ಸಾರುವ ಬುರ್ಖಾ ಧರಿಸಿದ್ದೇನೆ. ಮಹಿಳೆಯರ ಗೌರವದ ಸಂಕೇತ ಸಾರುವ ಬುರ್ಖಾ ಧರಿಸಿದ್ದೇನೆ. ಕಾವೇರಿ ನದಿ ನೀರು ವಿಚಾರವಾಗಿ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇನೆ ಎಂದು ಹೇಳಿಕೊಂಡಿದ್ದಾರೆ .

https://www.youtube.com/watch?v=NUhCvM–Ihk

Related posts

ಪಯಸ್ವಿನಿ ಹೊಳೆ ಬದಿಯಲ್ಲೊಂದು ದೇವರ ವನಭೋಜನ..! ಸಂಪಾಜೆಯ ಪಂಚಲಿಂಗೇಶ್ವರನ ಸನ್ನಿಧಿಯ ಈ ವನಭೋಜನಕ್ಕಿದೆ ವಿಶೇಷ ಶಕ್ತಿ

ಮಡಿಕೇರಿ: ಕಳೆದ ಮೂರೂವರೆ ತಿಂಗಳಲ್ಲಿ 11 ಬಾಲಕಾರ್ಮಿಕರು ಪತ್ತೆ, ಜಿಲ್ಲಾ ಕಾರ್ಮಿಕ ಇಲಾಖೆ ಹೇಳಿದ್ದೇನು?

ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟ ಭ್ರಷ್ಟ ತಹಶೀಲ್ದಾರ್‌ ಅಜಿತ್‌ ಕುಮಾರ್‌ಗೆ ವರ್ಗಾವಣೆ ಶಿಕ್ಷೆ ಮಾತ್ರ..?