ಕ್ರೈಂವೈರಲ್ ನ್ಯೂಸ್

ಕೆಂಡ ಹಾಯುವಾಗ ಮುಗ್ಗರಿಸಿ ಬಿದ್ದ ವೀರಗಾಸೆಯ ಪೂಜಾರಿ..! ಮುಂದೇನಾಯ್ತು..?

169

ನ್ಯೂಸ್ ನಾಟೌಟ್: ಬಸವೇಶ್ವರ ಕೊಂಡೋತ್ಸವದ ವೇಳೆ ಕೆಂಡ ಹಾಯುವಾಗ ವೀರಗಾಸೆ ಪೂಜಾರಿಯೊಬ್ಬರು ಎಡವಿ ಬಿದ್ದ ಘಟನೆ ನಡೆದಿದೆ. ಕೊಂಡ ಹಾಯುವ ವೇಳೆ ಬಿದ್ದರಿಂದ ಮೈ-ಕೈ ಸುಟ್ಟುಕೊಂಡಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಳಗನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಸವೇಶ್ವರ ಜಾತ್ರಾಮಹೋತ್ಸವದ ಅಗ್ನಿ ಕೊಂಡೋತ್ಸವದಲ್ಲಿ ಈ ಅವಘಡ ನಡೆದಿದೆ ಎಮದು ವರದಿ ತಿಳಿಸಿದೆ. ಹುಳಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರನ ಕೊಂಡೋತ್ಸವ ನಡೆಯುತ್ತಿತ್ತು.

ಈ ವೇಳೆ ಕೊಂಡ ಹಾಯಲು ಓಡಿ ಬರುವಾಗ ವೀರಗಾಸೆ ಪೂಜಾರಿ ಮುಗ್ಗರಿಸಿ ಬಿದ್ದಿದ್ದಾರೆ. ಕೂಡಲೇ ಅಲ್ಲಿದ್ದವರು ಬೆಂಕಿದಿಂದ ಮೇಲೆತ್ತಿದ್ದಾರೆ. ಮುಂಜಾಗ್ರತಾ ವಹಿಸಿದೇ ಮತ್ತೊಬ್ಬ ಪೂಜಾರಿ ದೇವರನ್ನು ಹೊತ್ತುಕೊಂಡು ಕೊಂಡ ಹಾಯಲು ಮುಂದಾಗಿದ್ದಾರೆ. ಈ ವೇಳೆ ಆತನೂ ಕೆಂಡಕ್ಕೆ ಬೀಳುವಾಗ ಕೈಯಲ್ಲಿದ್ದ ದೇವರನ್ನೆ ಬಿಟ್ಟು ಪಾರಾಗಿದ್ದಾರೆ. ಕೂದಲೆಳೆ ಅಂತರದಲ್ಲಿ ಪೂಜಾರಿ ಪಾರಾಗಿದ್ದಾರೆ. ಇನ್ನೂ ಗಾಯಗೊಂಡಿರುವ ವೀರಗಾಸೆ ಪೂಜಾರಿಯನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

See also  ಕೇಂದ್ರದ ಪಟ್ಟಿ ಬಿಡುಗಡೆಗೂ ಒಂದು ದಿನ ಮೊದಲೇ ಪುತ್ತೂರು, ಸುಳ್ಯ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದ 'ನ್ಯೂಸ್ ನಾಟೌಟ್'
  Ad Widget   Ad Widget   Ad Widget   Ad Widget   Ad Widget   Ad Widget   Ad Widget