ಕರಾವಳಿಶಿಕ್ಷಣಸುಳ್ಯ

ವಿದ್ಯಾಮಾತಾ ಅಕಾಡೆಮಿ ಮತ್ತು ಲಯನ್ಸ್ ಕ್ಲಬ್ ‘ಪುತ್ತೂರ್ದ ಮುತ್ತು’ ಸಹಯೋಗದಲ್ಲಿ ಆರೋಗ್ಯ ಸಂಕಲ್ಪ ಕಾರ್ಯಕ್ರಮ, ಕಾರ್ಯಾಗಾರದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿ

180

ನ್ಯೂಸ್ ನಾಟೌಟ್: ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವಿದ್ಯಾಮಾತಾ ಅಕಾಡೆಮಿಯಲ್ಲಿ ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ತರಬೇತಿಯನ್ನು ಪಡೆಯುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದೈಹಿಕ ಸದೃಢತೆಯ ಕಾರ್ಯಗಾರ ನಡೆಯಿತು.

ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಸಹಯೋಗದಲ್ಲಿ ಆರೋಗ್ಯ ಸಂಕಲ್ಪ ಕಾರ್ಯಕ್ರಮದ ಅಡಿಯಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ದ್ವಾರಕಾ ಕನ್ಸ್ಟ್ರಕ್ಷನ್ ನ ಆಡಳಿತ ನಿರ್ದೇಶಕ ಗೋಪಾಲಕೃಷ್ಣ ಭಟ್ ಪಾಲ್ಗೊಂಡರು. ಈ ವೇಳೆ ಮಾತನಾಡಿದ ಅವರು, “ಭವಿಷ್ಯದ ಯೋಧರಿಗೆ ಭದ್ರ ಬುನಾದಿ ಹಾಕುತ್ತಿರುವ ವಿದ್ಯಾಮಾತಾ ಅಕಾಡೆಮಿಗೆ ಸದಾ ನಾವು ಬೆಂಗಾವಲಾಗಿ ನಿಲ್ಲಬೇಕು. ಗ್ರಾಮೀಣ ಪ್ರದೇಶದ ಯುವ ಜನತೆ ದೇಶ ಸೇವೆಗೆ ಸೇರುವ ಕನಸನ್ನು ನನಸಾಗಿಸಲು ಅಕಾಡಮಿಯ ನಡೆಸುತ್ತಿರುವ ಕಾರ್ಯವೈಖರಿ ಮೆಚ್ಚುವಂತಹದ್ದು ಎಂದು ತಿಳಿಸಿದರು. ರೋಟರಿ ಕ್ಲಬ್ ಯುವ -ಪುತ್ತೂರು ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ ಮಾತನಾಡಿ, ‘ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವುದರ ಮೂಲಕ ತನ್ನದೇ ಆದ ಮೈಲುಗಲ್ಲನ್ನು ಸ್ಥಾಪಿಸಿರುವ ವಿದ್ಯಾಮಾತಾ ಅಕಾಡೆಮಿಯು ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ಕೂಡ ತರಬೇತಿ ನೀಡಿ ಯಶಸ್ವಿಯಾಗಿರುವುದು ಶ್ಲಾಘನೀಯ ಹಾಗೂ ಅಕಾಡೆಮಿಯ ಈ ಕಾರ್ಯಗಳಿಗೆ ನಾವೆಲ್ಲರೂ ಜೊತೆಯಾಗಿ ನಿಲ್ಲುವ ಕಾರ್ಯವಾಗಬೇಕು’ ಎಂದು ತಿಳಿಸಿದರು.

ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಕೋಶಾಧಿಕಾರಿಯಾದ ವತ್ಸಲಾ ಪದ್ಮನಾಭರವರು ಮಾತನಾಡಿ ಸಂಸ್ಥೆಯ ಪ್ರತೀ ಕಾರ್ಯಗಳಿಗೂ ತಮ್ಮ ಬೆಂಬಲ ಘೋಷಿಸಿ ಶುಭಹಾರೈಸಿದರು. ಸುನಿಲ್ ರಾಮಕೃಷ್ಣರವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆದ ಕಾರ್ಯಾಗಾರ ಮುಳಿಯ ಫಿಟ್ ನೆಸ್ ಮತ್ತು ವೆಲ್ ನೆಸ್ ಸೆಂಟರ್ ಇದರ ತರಬೇತುದಾರರಾದ ಸುನಿಲ್ ರಾಮಕೃಷ್ಣ ಭವಿಷ್ಯದ ಸೇನಾನಿಗಳಿಗೆ ತಮ್ಮ ದೈಹಿಕ ಸದೃಢತೆಯ ಜೊತೆಗೆ ತಮ್ಮ ಆರೋಗ್ಯವನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು ಎಂಬುದರ ಕುರಿತು ಸವಿಸ್ತಾರವಾಗಿ ತರಬೇತಿ ನೀಡಿ ವಿದ್ಯಾರ್ಥಿಗಳಲ್ಲಿ ಹೊಸ ಹುರುಪು ತುಂಬಿದರು.

ಕಾರ್ಯಕ್ರಮದಲ್ಲಿ ಸ್ವಾಗತ ಮತ್ತು ಪ್ರಾಸ್ತಾವಿಕ ನೆಲೆಯಲ್ಲಿ ಮಾತನಾಡಿದ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯೇಶ್ ರೈ, “ಸಶಸ್ತ್ರ ಪಡೆಗಳ ನೇಮಕಾತಿಯಲ್ಲಿ ದೈಹಿಕ ಸದೃಢತಾ ಪರೀಕ್ಷೆಯ ಮಹತ್ವ ಹಾಗೇ ಸಂಸ್ಥೆಯ ಸಾಧನೆಯ ಕುರಿತು ಬೆಳಕು ಚೆಲ್ಲಿದರು. ಅತಿಥಿಗಳನ್ನು ಸಂಸ್ಥೆಯ ಪರವಾಗಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾಮಾತಾ ಅಕಾಡೆಮಿಯ ದೈಹಿಕ ಸದೃಢತೆಯ ತರಬೇತುದಾರರಾದ ವಿಜೇತ್ ಕುಮಾರ್, ಚಂದ್ರಕಾಂತ್, ಚೇತನಾ ಸತೀಶ್ ಹಾಗೂ ಸಿಬ್ಬಂದಿ ಮಿಥುನ್ ರೈ ಹಾಗೂ ಸಶಸ್ತ್ರ ಪಡೆಗಳ ನೇಮಕಾತಿಯ ತರಬೇತಿಯ ಸದುಪಯೋಗ ಪಡೆದುಕೊಂಡ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

See also  'ಆರ್​ಎಸ್​ಎಸ್'​ ದಿ ಬಿಗ್ಗೆಸ್ಟ್ ಟೆರರಿಸ್ಟ್​ ಆರ್ಗನೈಸೇಷನ್ ಇನ್​ ದಿ ಕಂಟ್ರಿ, ವಿವಾದ ಸೃಷ್ಟಿಸಿದ ಮದರಸಾದಲ್ಲಿ ಸಿಕ್ಕಿದ ಆರ್ ಎಸ್ ಎಸ್ ಕುರಿತ ಪುಸ್ತಕ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget