ಕ್ರೀಡೆ/ಸಿನಿಮಾ

Actor Darshan ನಟ ದರ್ಶನ್​ಗೆ ಮಧ್ಯಂತರ ಜಾಮೀನು ಹಿನ್ನಲೆ ,ಪತ್ನಿ ವಿಜಯಲಕ್ಷ್ಮೀಯ ಇನ್​ಸ್ಟಾ ಪೋಸ್ಟ್​ ಭಾರಿ ವೈರಲ್!​ ಪೋಸ್ಟ್ ನಲ್ಲೇನಿದೆ?

ನ್ಯೂಸ್‌ ನಾಟೌಟ್‌ : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ( Actor Darshan ) ​ಗೆ ಹೈಕೋರ್ಟ್​ ಇಂದು (ಅ.30) ಮಧ್ಯಂತರ ಜಾಮೀನು ಮಂಜೂರು ಮಾಡಿದೆ.ಈ ಬೆನ್ನಲ್ಲೇ ದರ್ಶನ್​ ಪತ್ನಿ ವಿಜಯಲಕ್ಷ್ಮೀ ಅವರ ಇನ್ಸ್ಟಾಗ್ರಾಮ್ ಪೋಸ್ಟ್‌ ಭಾರಿ ವೈರಲ್ ಆಗಿದೆ.

ಹೌದು,ಹಲವು ದಿನಗಳ ಬಳಿಕ ತಮ್ಮ ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ ಅಸ್ಸಾಂನ ಕಾಮಾಕ್ಯದೇವಿ ದೇವಸ್ಥಾನದ ಫೋಟೋವನ್ನು ಶೇರ್​ ಮಾಡಿಕೊಂಡಿರುವ ವಿಜಯಲಕ್ಷ್ಮೀ ದೇವರಿಗೆ ಧನ್ಯವಾದ (Thankful) ಸಲ್ಲಿಸಿದ್ದಾರೆ.ಬಳಿಕ ಕೃತಜ್ಞ (Greatful) ಹಾಗೂ ಆಶೀರ್ವಾದ (Blessed) ಎಂದು ಬರೆದುಕೊಂಡಿದ್ದು, ಅಭಿಮಾನಿಗಳು ಈ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಇನ್ನು ದರ್ಶನ್​ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮೀ ಅವರು ಹಲವು ದೇಗುಲಗಳಿಗೆ ತೆರಳಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದ್ದರು. ಕೆಲ ತಿಂಗಳ ಹಿಂದೆ ಅಸ್ಸಾಂ ಗುವಾಹಟಿಯಲ್ಲಿರುವ ಕಾಮಾಕ್ಯದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಬಂದಿದ್ದರು. ದರ್ಶನ್​ಗಿರುವ ಅನಾರೋಗ್ಯದ ಬಗ್ಗೆ ತಿಳಿದಾಗ ಜಾಮೀನು ಪಡೆಯಲು ತುಂಬಾ ಕಷ್ಟಪಟ್ಟಿದ್ದರು. ಕೊನೆಗೂ ದರ್ಶನ್​ಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ವಿಜಯಲಕ್ಷ್ಮೀ ದೇವರಿಗೆ ಧನ್ಯವಾದ ಹೇಳಿದ್ದಾರೆ.

ಅಂದಹಾಗೆ ದರ್ಶನ್​, ನಾನು ತೀವ್ರ ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿದೆ. ಈ ಹಿನ್ನೆಲೆ ಮಧ್ಯಂತರ ಜಾಮೀನು ನೀಡಿ ಎಂದು ಅರ್ಜಿ ಸಲ್ಲಿಸಿದ್ದರು. ನಿನ್ನೆ (ಅ.29) ನಟ ದರ್ಶನ್ ಪರ ವಕೀಲ ಸಿ.ವಿ. ನಾಗೇಶ್​ ಅವರು ಮಂಡಿಸಿದ್ದರು. ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿಯವರ ಏಕಸದಸ್ಯ ಪೀಠ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಇಂದು ಬೆಳಗ್ಗೆ 10.30ರ ಸುಮಾರಿಗೆ ತೀರ್ಪು ಪ್ರಕಟಿಸಿದ ಹೈಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ. ಇದರಿಂದ ದರ್ಶನ್​ ಅಭಿಮಾನಿಗಳಿಗೆ ಬಹಳ ಖುಷಿಯಾಗಿದೆ. ಆದರೆ, ಬೇಸರ ಸಂಗತಿ ಏನೆಂದರೆ, ಇದು ಮಧ್ಯಂತರ ಜಾಮೀನು ಆಗಿದ್ದು, ಕೇವಲ 6 ವಾರಗಳು ಮಾತ್ರ ದರ್ಶನ್​ ಜೈಲಿನಿಂದ ಹೊರಗಡೆ ಇರಲಿದ್ದಾರೆ. ಸಮಯ ಮುಗಿದ ಬಳಿಕ ಮತ್ತೆ ಜೈಲು ಸೇರಬಹುದು ಅಥವಾ ಜಾಮೀನು ಅವಧಿ ವಿಸ್ತರಣೆ ಕೂಡ ಆಗಬಹುದಾ ಅನ್ನೋದನ್ನ ಕಾದು ನೋಡಬೇಕಷ್ಟೇ..

ಈ ಆರು ವಾರಗಳಲ್ಲಿ ನಟ ದರ್ಶನ್​ ತಮಗಿರುವ ಆರೋಗ್ಯ ಸಮಸ್ಯೆಗೆ ವೈದ್ಯಕೀಯ ಚಿಕಿತ್ಸೆಯನ್ನು ಪಡೆದುಕೊಳ್ಳಲಿದ್ದಾರೆ. ಅಲ್ಲದೆ, ಒಂದು ವಾರದಲ್ಲಿ ದರ್ಶನ್​ ಚಿಕಿತ್ಸೆಯ ವಿವರವನ್ನು ಸಹ ಕೋರ್ಟ್​ಗೆ​ ಸಲ್ಲಿಸಬೇಕಿದೆ. ಇನ್ನು ದರ್ಶನ್​ ಪಾಸ್​ಪೋರ್ಟ್​ ಅನ್ನು ಕೂಡ ಕೋರ್ಟ್​ ವಶಕ್ಕೆ ನೀಡಬೇಕಿದೆ. ಪಾಸ್​ಪೋರ್ಟ್​ ವಶಕ್ಕೆ ನೀಡಲು ಸರ್ಕಾರ ಪರ ವಕೀಲ ಪ್ರಸನ್ನ ಕುಮಾರ್​ ಆಗ್ರಹಿಸಿದ್ದರು. ಇನ್ನು ದರ್ಶನ್​ ಬಯಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ ಎಂದು ತಿಳಿದು ಬಂದಿದೆ.

Related posts

ಕೀನ್ಯಾದ ಕಾಡಿನಲ್ಲಿ ಕ್ರಿಕೆಟ್ ದೇವರು ಸಚಿನ್‌ ಗೆ ಬಿಲ್ಲು-ಬಾಣಗಳ ವಿಚಿತ್ರ ಸ್ವಾಗತ..! ಆದಿವಾಸಿ ಜನಾಂಗದ ಈ ಬಗೆಯ ಸ್ವಾಗತದ ರಹಸ್ಯವೇನು?

‘ನಾನು ಈಗಾಗಲೇ ಮದುವೆಯಾಗಿದ್ದೇನೆ, ಅವನನ್ನು ತುಂಬಾ ಪ್ರೀತಿಸುತ್ತೇನೆ’..! ಅಭಿಮಾನಿಗಳಿಗೆ ಶಾಕ್​ ಕೊಟ್ಟ ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ..!

ರಜನಿಕಾಂತ್​ ಮಾಜಿ ಅಳಿಯನ ಜೊತೆ ಸಂಬಂಧ..?15 ನೇ ವಯಸ್ಸಿಗೆ ಗರ್ಭಿಣಿಯಾದ ಸೌತ್‌ನ ಸ್ಟಾರ್‌ ನಟಿ ಯಾರು?