ಕ್ರೈಂವೈರಲ್ ನ್ಯೂಸ್

ಈ ಹಳ್ಳಿಯಲ್ಲಿ ಇನ್ನೂ ಜೀವಂತವಾಗಿದೆ ಜೀತಪದ್ಧತಿ..! ಕಾವಲಿಗೆ ಗೂಂಡಾಗಳನ್ನು ನೇಮಿಸಿ ಕೂಲಿ ಕೊಡದೆ ದುಡಿಸುತ್ತಿದ್ದಾರೆ ಎಂದ ಕಾರ್ಮಿಕರು..!

245

ನ್ಯೂಸ್ ನಾಟೌಟ್: ಜೀತ ಪದ್ದತಿ ಇನ್ನೂ‌ ಜೀವಂತವಾಗಿದ್ದು, ಶುಂಠಿ ಕ್ಯಾಂಪ್ ಗಳಲ್ಲಿ ಜೀತದಾಳುಗಳಂತೆ ದುಡಿಯುತ್ತಿದ್ದ 30ಕ್ಕೂ ಹೆಚ್ಚು ಬಡ ಕೂಲಿ ಕಾರ್ಮಿಕರನ್ನು ಪೊಲೀಸರು ಸೆ.4 ರಾತ್ರಿ ರಕ್ಷಣೆ ಮಾಡಿದ್ದಾರೆ.

ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಹಾಲ್ಕುರಿಕೆ ಗ್ರಾಮ, ಮಂಜುನಾಥ ಪುರ ಸುತ್ತಮುತ್ತಲ ಗ್ರಾಮಗಳಲ್ಲಿ ಕೆಲವು ಪ್ರಭಾವಿ ವ್ಯಕ್ತಿಗಳು ರೈತರಿಂದ ನೂರಾರು ಎಕರೆ ಭೂಮಿಯನ್ನ ಗುತ್ತಿಗೆ ಆಧಾರದಲ್ಲಿ‌ ಬಾಡಿಗೆ ಪಡೆದು ಶುಂಠಿ ಬೆಳೆಯನ್ನು ಬೆಳೆಯುತ್ತಿದ್ದಾರೆ.‌ ಶುಂಠಿ ಹೊಲದಲ್ಲಿ ಕೆಲಸ ಮಾಡಲು ಮೈಸೂರು, ಚಾಮರಾಜನಗರ, ಕೊಳ್ಳೆಗಾಲ,ಬಳ್ಳಾರಿ, ವಿಜಯಪುರ ಸೇರಿದಂತೆ ವಿವಿಧ ಭಾಗಗಳಿಂದ ಬಡ ಕೂಲಿ‌ ಕಾರ್ಮಿಕರಿಗೆ ಹೆಚ್ಚಿನ ಕೂಲಿ ಆಸೆ ತೋರಿಸಿ ಕರೆತಂದು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದಾರೆ ಎಂದು ಮಾಹಿತಿ ಲಭಿಸಿದ್ದ ಆಧಾರದಲ್ಲಿ ದಾಳಿ ನಡೆಸಲಾಗಿತ್ತು.

ಕಾರ್ಮಿಕರ ಬಳಿ ಇದ್ದ ಆಧಾರ್ ಕಾರ್ಡ್, ಓಟರ್ ಐಡಿ, ಮೊಬೈಲ್‌ ಇನ್ನಿತರೆ ವಸ್ತುಗಳನ್ನ ಕಿತ್ತುಕೊಂಡು ಹೆದರಿಸಿ ಶುಂಠಿ ಕ್ಯಾಂಪ್ ನಲ್ಲಿರಿಸಿದ್ದಾರೆ ಎನ್ನಲಾಗಿದೆ. ಕಾರ್ಮಿಕರ ಕಾವಲಿಗೆ ಗೂಂಡಾಗಳನ್ನು ನೇಮಿಸಿ ಜೀತದಾಳುಗಳ‌ಂತೆ ದುಡಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕಾರ್ಮಿಕರು ದಿನವಿಡೀ ನಿರಂತರವಾಗಿ ಹೊಲದಲ್ಲಿ ಕೆಲಸ ಮಾಡಬೇಕು. ಒಂದು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದರೆ, ಕೆಲಸ ಮಾಡದಿದ್ದರೆ ಕಾವಲುಗಾರರು ದೊಣ್ಣೆಗಳಿಂದ ಮೈ ಬರೆ ಬರುವ ಹಾಗೆ ಹೊಡೆದು ದೌರ್ಜನ್ಯ ಮಾಡುತ್ತಾರೆ ಎಂದು ಕಾರ್ಮಿಕರು ಹೇಳಿಕೊಂಡಿದ್ದಾರೆ.

ಇದುವರೆಗೂ ಒಂದು ರೂ. ಕೂಲಿಯನ್ನು ನೀಡಿಲ್ಲ, ಸಂಜೆಯಾದರೆ ಮದ್ಯ ನೀಡುತ್ತಾರೆ, ಕೂಲಿ ಕೇಳಿದರೆ ಹೊಡೆಯುತ್ತಾರೆ ಎಂದು ಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ. ಸ್ಥಳೀಯರ ನೆರವಿನಿಂದ ಹೊನ್ನವಳ್ಳಿ ಪೋಲೀಸರು ಕೂಲಿ ಕಾರ್ಮಿಕರನ್ನು ರಕ್ಷಣೆ ಮಾಡಿದ್ದಾರೆ.

Click

https://newsnotout.com/2024/09/darshan-thugudeepa-women-protest-infront-of-jail-kannada-news-ballary/
https://newsnotout.com/2024/09/darshan-and-others-party-celebration-before-act-photo-revealed/
https://newsnotout.com/2024/09/airplane-parts-are-droped-to-house-kannada-news-control-room/
https://newsnotout.com/2024/09/tulunadu-culture-are-misused-in-maharatra-kanada-news-kantara-effect/
https://newsnotout.com/2024/09/ksrtc-and-school-bus-collision-rayachur-40-students-in-kannada-news/
https://newsnotout.com/2024/09/pattanagere-shed-bengaluru-renukaswami-photo-leaked-kannada-news/
https://newsnotout.com/2024/09/konkana-railway-job-vacancy-kannada-news-karnataka-190-jobs/
See also  ಬೆಳ್ಳಂಬೆಳಿಗ್ಗೆ ಸಿಲಿಂಡರ್‌ ಸ್ಫೋಟ..! ಐದು ಮನೆಗಳು ಜಖಂ..! ಮುಂದೇನಾಯ್ತು..?
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget