ಕರಾವಳಿದೇಶ-ಪ್ರಪಂಚರಾಜಕೀಯ

ಮಣಿಪುರದಲ್ಲಿ ಹಿಂಸಾಚಾರಕ್ಕೆ ಮತ್ತೆ ಮೂವರ ದುರಂತ ಸಾವು ,ಜನಾಂಗೀಯ ಹಿಂಸಾಚಾರ ಪ್ರಕರಣ ಬೆನ್ನಲ್ಲೇ ಇದೇನಿದು ಭಯಾನಕ ಘಟನೆ?

ನ್ಯೂಸ್ ನಾಟೌಟ್ : ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿತ್ತು. ಇದೀಗ  ಮತ್ತೆ ಹಿಂಸಾಚಾರದಿಂದ 3 ಜನ ಸಾವನ್ನಪ್ಪಿದ್ದಾರೆ ಎನ್ನುವ ಭಯಾನಕ ಸಂಗತಿ ಹೊರ ಬಿದ್ದಿದೆ. ಬಿಷ್ಣುಪುರ್ ಜಿಲ್ಲೆಯಲ್ಲಿ ಇಂದು (ಆ.5) ಮುಂಜಾನೆ ನಡೆದ ಹಿಂಸಾಚಾರದಲ್ಲಿ ತಂದೆ-ಮಗ ಸೇರಿದಂತೆ ಮೂವರು ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರ ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಶಂಕಿತ ವ್ಯಕ್ತಿಗಳು ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಬಿಷ್ಣುಪುರದ ಕ್ವಾಕ್ಟಾ ಬಳಿಯ ಉಖಾ ತಂಪಕ್ ಗ್ರಾಮದ ಮೇಲೆ ದಾಳಿ ನಡೆಸಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಈ ಬಗ್ಗೆ ತನಿಖೆ ಮುಂದುವರಿದಿದೆ.ಆದರೆ ಘಟನೆಗೆ ಸಂಬಂಧ ಪಟ್ಟ ಹಾಗೆ ಮಾಹಿತಿ ಲಭ್ಯವಾಗಿದೆ.

ಗುಂಡಿನ ದಾಳಿಯಲ್ಲಿ ತಂದೆ ಮತ್ತು ಮಗ ಸೇರಿದಂತೆ ಪಕ್ಕದ ಮನೆಯಲ್ಲಿದ್ದ ಮತ್ತೊಬ್ಬ ವ್ಯಕ್ತಿ ಮೇಲೆಯು ಗುಂಡು ಹಾರಿಸಲಾಗಿದೆ ಎನ್ನುವ ವಿಚಾರ ಮನಕಲಕುವಂತಿದೆ.ಈ ಪ್ರದೇಶದಲ್ಲಿ ಜನ ನಿತ್ಯ ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.ಹೀಗಾಗಿ ನಿರಾಯುಧ ಗ್ರಾಮದಲ್ಲಿ ಹಿಂಸಾಚಾರ ಹೆಚ್ಚಾಗಿದ್ದು, ಮನೆಯಲ್ಲಿ ಮಹಿಳೆಯರು, ಮಕ್ಕಳು ಇದ್ದಾರೆ ಎಂದು ರಾತ್ರಿ ವೇಳೆ ಮನೆ ಕಾವಲು ಕಾಯುತ್ತಿದ್ದರು ಎಂದು ಹೇಳಲಾಗಿದೆ.

ಈ ಘಟನೆ ಸಂಬಂಧ ಪಟ್ಟ ಹಾಗೆ ಮಾಹಿತಿ ಕಲೆ ಹಾಕಲಾಗಿದ್ದು,ಸ್ಪೋಟಕ ಸಂಗತಿಗಳು ಬಯಲಾಗಿವೆ. ದಾಳಿಕೋರರು ಕೇಂದ್ರ ಭದ್ರತಾ ಪಡೆಯ ನಿಯಂತ್ರಣದಲ್ಲಿರುವ ಬೆಟ್ಟಗಳು ಮತ್ತು ಕಣಿವೆಗಳ ನಡುವಿನ ಬಫರ್ ವಲಯದಿಂದ ಕದ್ದುಮುಚ್ಚಿ ಬರುತ್ತಿದ್ದಾರೆ ಎಂದು ಸಂಶಯ ವ್ಯಕ್ತವಾಗಿದೆ. ಇದರಿಂದ ಅಲ್ಲಿಯ ಜನರಲ್ಲಿ ಆತಂಕ ಮನೆ ಮಾಡಿದ್ದು, ಈ ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

Related posts

ಬೋರ್ಡ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ..! ಪ್ರಶ್ನಾಪತ್ರಿಕೆಯನ್ನು ವಾಟ್ಸಾಪ್ ಗ್ರೂಪ್ ಗಳಿಗೆ ಹಾಕಿದ್ಯಾರು..?

ತುಳುನಾಡು ದೈವಗಳ ಹರಕೆಕೋಲ ನೆರವೇರಿಸಿದ ಸ್ಪೀಕರ್‌ ಯುಟಿ ಖಾದರ್..! ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಧಾರ್ಮಿಕ ಮುಖಂಡನಿಂದ ಆಕ್ರೋಶ..!ಪೋಸ್ಟ್‌ನಲ್ಲೇನಿದೆ?

ಟ್ರಾನ್ಸ್‌ ಲೇಷನ್‌ಆ್ಯಪ್‌ಗೆ ಅವಲಂಬಿತರಾಗಿದ್ದೀರಾ?ಪೊಲೀಸರ ಅತಿಥಿಯಾಗಬಹುದು ಜೋಕೆ..!ಟ್ರಾನ್ಸ್‌ ಲೇಷನ್‌ Appನ ಯಡವಟ್ಟಿನಿಂದಾಗಿ ಇಲ್ಲೊಬ್ಬ ಯುವಕನನ್ನು ಪೊಲೀಸರು ಬಂಧಿಸಿದ್ದೇಕೆ?