ಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ದೇವರಿಗೆ ಕೈಮುಗಿದು ಮೂರ್ತಿಯ ಮೇಲಿದ್ದ ಬೆಳ್ಳಿ ಕಿರೀಟ ಎಗರಿಸಿದ ಯುವಕ..! ಇಲ್ಲಿದೆ ವೈರಲ್ ವಿಡಿಯೋ

138

ನ್ಯೂಸ್ ನಾಟೌಟ್: ವಿಠ್ಠಲ್ ದೇವಸ್ಥಾನದಿಂದ ಬೆಳ್ಳಿ ಕಿರೀಟವನ್ನು ಕದ್ದ ಘಟನೆ ಮಂಬೈನ ಬೋರಿವಲಿ ಪೂರ್ವದ ರಸ್ತೆ ಸಂಖ್ಯೆ 5ರ ದೇಗುಲದಲ್ಲಿ ನಡೆದಿದೆ. ಘನಶ್ಯಾಮ್​​​​ ವರ್ಮಾ (26) ಎಂಬಾತನನ್ನು ಕಸ್ತೂರ್ಬಾ ಪೊಲೀಸರು ಬಂಧಿಸಿದ್ದಾರೆ.

ಆತ ದೇವರ ಬೆಳ್ಳಿ ಕಿರೀಟ ಕದ್ದಿಯುತ್ತಿರುವ ದೃಶ್ಯ ದೇವಾಲಯದ ಗರ್ಭಗುಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಕಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮೂಲತಃ ರಾಜಸ್ಥಾನದವರಾದ ವರ್ಮಾ ಉದ್ಯೋಗ ಅರಸಿ ಮುಂಬೈಗೆ ಬಂದಿದ್ದ. ಉದ್ಯೋಗ ಸಿಗದೆ ನಿರುದ್ಯೋಗಿಯಾದ್ದರಿಂದ ಹಣಕ್ಕಾಗಿ ಈ ಕೆಲಸ ಮಾಡಿರುವುದು ತನಿಖೆಯ ವೇಳೆ ಬಾಯ್ಬಿಟ್ಟಿದ್ದಾನೆ. 350 ಗ್ರಾಂ ತೂಕದ ಬೆಲೆಬಾಳುವ ಕಿರೀಟವನ್ನು ಕದಿಯುವ ಮೊದಲು ಯುವಕ ದೇವರಿಗೆ ಕೈ ಮುಗಿಯುತ್ತಿರುವುದನ್ನು ವಿಡಿಯೋದಲ್ಲಿ ಸೆರೆಯಾಗಿದೆ.

Click 👇

https://newsnotout.com/2024/07/hardik-padya-divorce-announcement-officially-with-padya-kannada-news/
https://newsnotout.com/2024/07/dengue-awarness-reels-and-reward-for-that-kannada-news-viral-news/
https://newsnotout.com/2024/07/education-and-conflict-in-festivals-kannada-news-viral-post/
https://newsnotout.com/2024/07/hotel-student-suspence-kannada-police-investiagtion-kananfda-newsa-news/
https://newsnotout.com/2024/07/belthagady-flood-rain-kannada-news-land-slide-traffic-dc/
https://newsnotout.com/2024/07/indo-pak-war-weapons-found-in-pond-of-fishing-kannada-news-viral-video/
See also  ರಾಜಿಯಾದ ಮಾತ್ರಕ್ಕೆ ಲೈಂಗಿಕ ಕಿರುಕುಳ ಕೇಸ್‌ ರದ್ದು ಮಾಡಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್..! ಶಿಕ್ಷಕನ ವಿರುದ್ಧ ಕಾನೂನು ಕ್ರಮಕ್ಕೆ ಆದೇಶ..!
  Ad Widget   Ad Widget     Ad Widget   Ad Widget   Ad Widget   Ad Widget