ರಾಜಕೀಯರಾಜ್ಯ

ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದ ಕಾಗೇರಿ ವಿರುದ್ಧ ಆಕ್ರೋಶ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಲೋಕಸಭಾ ಸದಸ್ಯರಾಗಿ ಚುನಾಯಿತರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕನ್ನಡ ಮತ್ತು ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ ಎಂದು ಕರ್ನಾಟಕ ವಿಕಾಸ ರಂಗ ವಿರೋಧ ವ್ಯಕ್ತಪಡಿಸಿದೆ.

ಕರುನಾಡಿನ ಮತದಾರರಿಂದ ಆಯ್ಕೆಯಾದ ರಾಜ್ಯದ ಎಲ್ಲ ಸಂಸದರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರೆಲ್ಲರಿಗೂ ಅಭಿನಂದನೆಗಳು. ಆದರೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕನ್ನಡವನ್ನು ಕಡೆಗಣಿಸಿ, ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದಕ್ಕಾಗಿ ಅವರಿಗೆ ಧಿಕ್ಕಾರ ಹೇಳುತ್ತೇವೆ ಎಂದು ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ. ಚನ್ನೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಬಿಜೆಪಿ ನಾಯಕಿ ದಿವಂಗತ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್ (Bansuri Swaraj) ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ತಾಯಿಯ ಸಂಪ್ರದಾಯವನ್ನು ಮುಂದುವರಿಸಿದ್ದರು. ಈ ಸಂದರ್ಭದಲ್ಲಿ, ತಾಯಿ ಸುಷ್ಮಾ ಸ್ವರಾಜ್ ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದ ಬಗ್ಗೆ ನೆನಪಿಸಿಕೊಂಡಿದ್ದರು. ಈಗ ವಿಶ್ವೇಶ್ವರ ಹೆಗಡೆ ಕಾಗೇರಿ ಅದೇ ರೀತಿ ಅನುಸರಿಸಲು ಹೋಗಿ ಕನ್ನಡ ಸಂಘಟನೆಗಳು ಮತ್ತು ಕರ್ನಾಟಕ ವಿಕಾಸ ರಂಗ ವಿರೋಧ ವ್ಯಕ್ತಪಡಿಸಿವೆ.

Click 👇

https://newsnotout.com/2024/06/kempegowda-devotees-celebration-conflict-with-mulims-in-kolara
https://newsnotout.com/2024/06/lk-advani-doctors-kannada-news-health-issue-wednesday
https://newsnotout.com/2024/06/kodagu-bhagamandala-madikeri-kannada-news-triveni
https://newsnotout.com/2024/06/tesla-kannada-news-doctor-of-indian-origin-in-america-his-wife-and-baby-issue
https://newsnotout.com/2024/06/dk-shivakumar-okkaliga-swamiji-demands-for-cm-position-for-dk-shivakumar-kannada-news

Related posts

ಮುಡಾ ಹಗರಣ : “ನಾನು ರಾಜೀನಾಮೆ ‌ಕೊಡುವ ತಪ್ಪು ಮಾಡಿಲ್ಲ” ರಾಜ್ಯಪಾಲರ ನಿರ್ಧಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಪ್ರಿಯತಮೆಯ ಮನೆ ಮುಂದೆ ಪೊಲೀಸ್ ಕಾನ್‌ಸ್ಟೇಬಲ್ ನ ಪತ್ನಿಯಿಂದ ಪ್ರತಿಭಟನೆ..! ಏನಿದು ಪೊಲೀಸಪ್ಪನ ಪೋಲಿಯಾಟ..?

ಕಲ್ಯಾ ಮತ್ತು ಪಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ವಿ ಸುನೀಲ್ ಕುಮಾರ್ ಚುನಾವಣಾ ಪ್ರಚಾರ ಸಭೆ, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಚಿಂತನೆ