ಜೀವನ ಶೈಲಿ/ಆರೋಗ್ಯಬೆಂಗಳೂರುರಾಜಕೀಯವೈರಲ್ ನ್ಯೂಸ್

ಮತದಾನ ಮಾಡಿದ ಬಳಿಕ ಗ್ರಾಹಕರಿಗೆ ಉಚಿತ ಆಹಾರ..! ಹೋಟೆಲ್‌ ಗಳಿಗೆ ಹೈಕೋರ್ಟ್ ನೀಡಿದ ಸೂಚನೆಗಳೇನು..?

ನ್ಯೂಸ್ ನಾಟೌಟ್: ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತದಾನವಾಗಬೇಕೆಂಬ ಉದ್ದೇಶದಿಂದ ಮತದಾನ ಮಾಡಿ ಬರುವ ಗ್ರಾಹಕರಿಗೆ ಉಚಿತ ಆಹಾರ ಒದಗಿಸುವ ಬೆಂಗಳೂರು ಹೋಟೆಲ್ ಸಂಘದ ನಿರ್ಧಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.

ಉಚಿತ ಆಹಾರ ನೀಡುವುದಕ್ಕೆ ಬಿಬಿಎಂಪಿ ಆಕ್ಷೇಪಣೆ ಪ್ರಶ್ನಿಸಿ ಬೆಂಗಳೂರು ಹೋಟೆಲ್ ಸಂಘ ಮತ್ತು ನಿಸರ್ಗ ಗ್ರ್ಯಾಂಡ್ ಹೋಟೆಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಇಂದು(ಎ.೨೪) ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರ ಸಂಘ ಯಾವುದೇ ರಾಜಕೀಯ ದುರುದ್ದೇಶದಿಂದ ಈ ನಿರ್ಧಾರ ತೆಗೆದುಕೊಂಡಿಲ್ಲ.

ಮತದಾನದ ಉತ್ತೇಜನಕ್ಕೆ ನಾವು ಈ ಕಾರ್ಯ ಕೈಗೊಂಡಿದ್ದು, ಈ ಹಿಂದೆಯೂ ಮತದಾರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಉಚಿತ ಆಹಾರ ವಿತರಣೆ ಮಾಡಿದ್ದೇವೆ. ಹಾಗಾಗಿ ನಮ್ಮ ನಿರ್ಧಾರಕ್ಕೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು. ಕೆಲಕಾಲ ವಾದ ಆಲಿಸಿದ ನ್ಯಾಯಪೀಠ ಅರ್ಜಿದಾರರ ಉತ್ತಮ ನಡೆಗೆ ಪ್ರಶಂಸೆ ವ್ಯಕ್ತಪಡಿಸಿತು. ಚುನಾವಣೆ ದಿನ ಮತದಾನ ಮಾಡಿ ಬಂದ ಗ್ರಾಹಕರಿಗೆ ಉಚಿತವಾಗಿ ಆಹಾರ ನೀಡಲು ಅವಕಾಶ ಕಲ್ಪಿಸಿ ಹೋಟೆಲ್ ಮಾಲೀಕರಿಗೆ ಹೈಕೋರ್ಟ್ ಅನುಮತಿ ನೀಡಿದೆ ಎಂದು ವರದಿ ತಿಳಿಸಿದೆ.

Related posts

ಡೆಂಗ್ಯೂಗೆ 11ರ ಬಾಲಕಿ ಸಾವು..! ಆಸ್ಪತ್ರೆಗಳಿಗೆ ಅಲೆದಾಡಿದ ಕುಟುಂಬಸ್ಥರು..!

ಸುಳ್ಯ: ಹಿಂದೂ ಯುವತಿ ಜೊತೆ ಕಾರಿನಲ್ಲಿ ಬಂದ ಅನ್ಯಕೋಮಿನ ಯುವಕನ ತಡೆದ ಪ್ರಕರಣ, ಕ್ಲೈ ಮ್ಯಾಕ್ಸ್ ನಲ್ಲಿ ನಡೆದಿದ್ದೇನು..? ಇಲ್ಲಿದೆ ಡಿಟೇಲ್ಸ್

CM ಸಿದ್ದರಾಮಯ್ಯ, DCM ಡಿ.ಕೆ ಶಿವಕುಮಾರ್‌ಗೆ ಕೋರ್ಟ್ ಸಮನ್ಸ್! ಸಿಎಂ, ಡಿಸಿಎಂ ಸೇರಿ 36 ಕಾಂಗ್ರೆಸ್​ ನಾಯಕರ ವಿರುದ್ಧ ಕೇಸ್ ದಾಖಲು!