Latestಕ್ರೈಂದೇಶ-ವಿದೇಶಬೆಂಗಳೂರುವೈರಲ್ ನ್ಯೂಸ್

ಪಾಳು ಬಾವಿಯಲ್ಲಿ 17 ಕೆ.ಜಿ ಚಿನ್ನ ಬಚ್ಚಿಟ್ಟಿದ್ದ ಸಹೋದರರು ಅರೆಸ್ಟ್..! ದರೋಡೆಗೂ ಮುನ್ನ ಗಡಿ ಚೌಡಮ್ಮನಿಗೆ ಅಷ್ಟಧಿಗ್ಬಂಧನ ಪೂಜೆ ಮಾಡಿಸಿದ್ದ ಖದೀಮರು..!

1.4k

ನ್ಯೂಸ್‌ ನಾಟೌಟ್: ನ್ಯಾಮತಿ ಎಸ್‍ ಬಿಐ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಆರು ತಿಂಗಳ ಬಳಿಕ ಚಿನ್ನಾಭರಣ ಸಹಿತ ಅರೋಪಿಗಳ ಬಂಧನವಾಗಿದೆ. ಪ್ರಮುಖ ಆರೋಪಿಗಳಾದ ತಮಿಳುನಾಡು ಮೂಲದ ಸಹೋದರರಾದ ಅಜಯ್​ ಹಾಗೂ ವಿಜಯ್ ಸೇರಿದಂತೆ ಒಟ್ಟು ಆರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಬೆಂಗಳೂರು ಪೂರ್ವ ವಲಯ ಐಜಿಪಿ ಡಾ.B.R.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. 2024ರ ಅಕ್ಟೋಬರ್ 28ರಂದು ನ್ಯಾಮತಿ ಎಸ್‍ ಬಿಐ ಬ್ಯಾಂಕ್ ​ನಲ್ಲಿ 13 ಕೋಟಿ ರೂ. ಮೌಲ್ಯದ 17 ಕೆಜಿ 750 ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು. ಆರೋಪಿಗಳು ದರೋಡೆಗೆ ಮೊದಲು, ದರೋಡೆಯ ನಂತರ ದರೋಡೆಕೋರರು ಗಡಿ ಚೌಡಮ್ಮನ ಅಷ್ಟಧಿಗ್ಬಂಧನ ಪೂಜೆ ಮಾಡಿದ್ದರು. ಅಲ್ಲದೇ ದರೋಡೆಯ ಮಾಹಿತಿಯನ್ನು ಕುಟುಂಬಸ್ಥರ ಜೊತೆಯೂ ಹಂಚಿಕೊಂಡಿರಲಿಲ್ಲ. ಪೊಲೀಸರು ಆರೋಪಿಗಳನ್ನು ಟೆಕ್ನಿಕಲ್ ಎವಿಡೆನ್ಸ್ ಮೂಲಕ ಬಂಧಿಸಿದ್ದಾರೆ.

ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ವಿಜಯ್ ಕುಮಾರ್ ನ್ಯಾಮತಿಯಲ್ಲಿ ಬೇಕರಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ. ಬ್ಯಾಂಕ್‍ ನಲ್ಲಿ ಲೋನ್ ಪಡೆಯಲು ಎರಡು ಬಾರಿ ಅರ್ಜಿ ಹಾಕಿದ್ದ, ಈ ಅರ್ಜಿ ತಿರಸ್ಕಾರವಾಗಿತ್ತು. ಇದರಿಂದ ರೋಸಿ ಹೋಗಿದ್ದ. ಇದೇ ಕಾರಣಕ್ಕೆ ಬ್ಯಾಂಕ್ ದರೋಡೆಗೆ ಹಿಂದಿ ವೆಬ್ ಸೀರಿಸ್ ನೋಡಿ ದರೋಡೆಗೆ ಸಂಚು ರೂಪಿಸಿದ್ದ ಎಂದು ತಿಳಿದುಬಂದಿದೆ.

ಇನ್ನು ಆರೋಪಿಗಳು ಮೊಬೈಲ್, ವಾಹನ ಬಳಸಲಿಲ್ಲ, ಯಾವ ಸಾಕ್ಷಿಯನ್ನೂ ಬಿಡದೆ ದರೋಡೆ ಮಾಡಿದ್ದರು. ದರೋಡೆ ಮಾಡಿದ 17 ಕೆಜಿ ಚಿನ್ನವನ್ನು ತಮಿಳುನಾಡಿನ ಮಧುರೈನಲ್ಲಿರುವ ತೋಟದ ಮನೆಯ ಪಾಳು ಬಿದ್ದ ಬಾವಿಯಲ್ಲಿ ಇಟ್ಟಿದ್ದರು ಎನ್ನಲಾಗಿದೆ.

ಪ್ರಮುಖ ಆರೋಪಿಗಳಾದ ತಮಿಳುನಾಡು ಮೂಲದ ಅಜಯ್​, ವಿಜಯ್ ಸೇರಿದಂತೆ ಆರು ಆರೋಪಿಗಳ ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ. ಬ್ಯಾಂಕ್‌ನಲ್ಲಿ 509 ಗ್ರಾಹಕರು ಅಡವಿಟ್ಟಿದ್ದ 17 ಕೆಜಿ 750 ಗ್ರಾಂ ಚಿನ್ನವನ್ನು ಅ.28ರಂದು ಕದ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಜೈಲಿನಲ್ಲಿರುವ ಪಾಕ್ ಮಾಜಿ ಪ್ರಧಾನಿ ಇಮ್ರಾನ್‌ ಖಾನ್ ಹೆಸರು ‘ನೊಬೆಲ್ ಶಾಂತಿ ಪ್ರಶಸ್ತಿ’ಗೆ ಶಿಫಾರಸು..! ಇಲ್ಲಿದೆ ಸಂಪೂರ್ಣ ಮಾಹಿತಿ

ನಾಳೆಯಿಂದ(ಎ.1) ಕಸಕ್ಕೂ ಟ್ಯಾಕ್ಸ್ ಕಟ್ಟಬೇಕು..! ‘ಬಿಬಿಎಂಪಿ’ಯಿಂದ ಹೊಸ ನಿಯಮ..!

 

See also  ಮೋದಿ ಭೇಟಿ ಬಳಿಕ ಭಾರತಕ್ಕೆ ಎಲೋನ್ ಮಸ್ಕ್ ಶಾಕ್..! ಭಾರತಕ್ಕೆ ಬರುತ್ತಿದ್ದ 21 ಮಿಲಿಯನ್ ಡಾಲರ್ ವಿದೇಶಿ ನೆರವು ನಿಲ್ಲಿಸಿದ ಅಮೆರಿಕ..!
  Ad Widget   Ad Widget     Ad Widget   Ad Widget   Ad Widget   Ad Widget