Latestದೇಶ-ವಿದೇಶ

ವಕ್ಫ್ ತಿದ್ದುಪಡಿಗೆ ತಡೆ, ಯಥಾಸ್ಥಿತಿ ಕಾಪಾಡಿ ಎಂದ ಸುಪ್ರೀಂ ಕೋರ್ಟ್..! ಇಲ್ಲಿದೆ ಸಂಪೂರ್ಣ ಮಾಹಿತಿ

549

ನ್ಯೂಸ್ ನಾಟೌಟ್: ಮುಂದಿನ ವಿಚಾರಣೆಯವರೆಗೆ ವಕ್ಫ್‌ ಮಂಡಳಿಗೆ ಮುಸ್ಲಿಮೇತರರನ್ನು ನೇಮಕ ಮಾಡುವಂತಿಲ್ಲ ಮತ್ತು ವಕ್ಫ್ ಕಾಯ್ದೆ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್ ಗುರುವಾರ(ಎ.17) ಆದೇಶ ನೀಡಿದೆ.

ವಕ್ಫ್ (ತಿದ್ದುಪಡಿ) ಕಾಯ್ದೆ 2025ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ ಪ್ರಾರಂಭಿಸಿದೆ. 

ಇಂದು ಸಹ ವಿಚಾರಣೆ ಮುಂದುವರೆಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಹಾಗೂ ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಸಿಂಧುತ್ವ ಪ್ರಶ್ನಿಸಿದ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಕೇಂದ್ರ ಸರ್ಕಾರಕ್ಕೆ 7 ದಿನಗಳ ಕಾಲಾವಕಾಶ ನೀಡಿದೆ.

“ಇಷ್ಟು ಅರ್ಜಿಗಳನ್ನು ನಿಭಾಯಿಸುವುದು ಅಸಾಧ್ಯ. ಕೇವಲ 5 ಅರ್ಜಿಗಳನ್ನು ಮಾತ್ರ ಆಲಿಸಲಾಗುವುದು. ಯಾವ ಐದು ಅರ್ಜಿಗಳನ್ನು ವಿಚಾರಣೆ ನಡೆಸಬೇಕು ಎಂಬುದನ್ನು ನೀವೇ ಆಯ್ಕೆ ಮಾಡಿ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅರ್ಜಿದಾರರು 5 ದಿನಗಳಲ್ಲಿ ಕೇಂದ್ರದ ಉತ್ತರಕ್ಕೆ ಮರು ಪ್ರತಿಕ್ರಿಯೆ ಸಲ್ಲಿಸಬಹುದು, ನಂತರ ಮಧ್ಯಂತರ ಆದೇಶಗಳಿಗಾಗಿ ವಿಷಯವನ್ನು ಪಟ್ಟಿ ಮಾಡಲಾಗುವುದು ಎಂದು ಹೇಳಿ, ವಿಚಾರಣೆಯನ್ನು ಮೇ 5ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ. “ಈ ಮಧ್ಯೆ ಕೇಂದ್ರ ವಕ್ಫ್ ಮಂಡಳಿ ಮತ್ತು ಇತರ ಮಂಡಳಿಗಳಲ್ಲಿ ಯಾವುದೇ ನೇಮಕಾತಿ ನಡೆಸಬಾರದು” ಎಂದು ಕೇಂದ್ರ ಸರ್ಕಾರ ಸಮಯ ಕೇಳಿದ ನಂತರ ಸುಪ್ರೀಂ ಕೋರ್ಟ್ ಹೇಳಿದೆ.

ಪೋಷಕರ ಇಚ್ಛೆಗೆ ವಿರುದ್ಧವಾಗಿ ವಿವಾಹವಾಗುವ ಜೋಡಿಗಳಿಗೆ ಪೊಲೀಸ್ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದ ಕೋರ್ಟ್..! ವಿವಾಹಕ್ಕೆ ಪೊಲೀಸ್ ರಕ್ಷಣೆ ಕೋರಿ ಅರ್ಜಿ ಸಲ್ಲಿಸಿದ್ದ ಜೋಡಿ..!

See also  ಹೋಟೆಲ್ ನಲ್ಲಿ ಪಾತ್ರೆ ತೊಳೆಯುತ್ತಿದ್ದಾಕೆ, ಈಗ ತಿಂಗಳಿಗೆ 30 ಕೋಟಿ ರೂ. ಸಂಪಾದನೆ..!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget