ನ್ಯೂಸ್ ನಾಟೌಟ್ : ಶೌಚ ಗುಂಡಿ ಸ್ವಚ್ಛಗೊಳಿಸುವಾಗ ಒಂದೇ ಕುಟುಂಬದ ಮೂವರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಪ್ರಹ್ಲಾದ್ ಮಂಡಲ್ (60), ಅವರ ಮಗಳು ತನು ವಿಶ್ವಾಸ್ (32) ಮತ್ತು ಅವರ ಅಳಿಯ ಕಾರ್ತಿಕ್ ವಿಶ್ವಾಸ್ (38) ಎಂದು ಗುರುತಿಸಲಾಗಿದೆ.
ಪ್ರಹ್ಲಾದ್ ಮಂಡಲ್ ಇತ್ತೀಚೆಗೆ 8 ಅಡಿ ಆಳದ ಹೊಸ ಶೌಚ ಗುಂಡಿ ನಿರ್ಮಿಸಿದ್ದರು. ಇದರ ಸ್ವಚ್ಛಗೊಳಿಸಲು ಮಗಳು, ಅಳಿಯನೊಂದಿಗೆ ಇಳಿದಿದ್ದರು. ಈ ವೇಳೆ ಪಕ್ಕದ ಹಳೆಯ ಶೌಚ ಗುಂಡಿಯಿಂದ ಅನಿಲ ಸೋರಿಕೆಯಾಗಿದೆ. ಇದರಿಂದ ಆಳದ ಶೌಚ ಗುಂಡಿಯಿಂದ ಹೊರಬರಲಾರದೆ ಒದ್ದಾಡಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತನು ಹಾಗೂ ಕಾರ್ತಿಕ್ ಅವರ ಸಾವಿನಿಂದ ಮಕ್ಕಳು ಅನಾಥರಾಗಿದ್ದಾರೆ.
ಕೋತಿಗೆಂದು ಅಪ್ಪ ಎಸೆದ ಕೊಡಲಿ ಮಗನ ಕತ್ತು ಸೀಳಿದೆ..! ಮಗುವಿನ ಸಾವಿನ ಬಗ್ಗೆ ಸಂಬಂಧಿಕರಿಗೆ ಅನುಮಾನ..!