ಬೆಂಗಳೂರು: ಆಂತರಿಕ ಒತ್ತಡ ಮತ್ತು ವಾಣಿಜ್ಯೋದ್ಯಮ ಸಮುದಾಯದ ಬೇಡಿಕೆಗೆ ತಲೆಬಾಗಿರುವ ಸರ್ಕಾರ ವಾರಾಂತ್ಯ ಕರ್ಫ್ಯೂವನ್ನು ಕೈಬಿಡಲು ನಿರ್ಧರಿಸಿದೆ. ಆದರೆ, ರಾತ್ರಿ ಕರ್ಫ್ಯೂ ಸೇರಿ ಉಳಿದ ಎಲ್ಲಾ ನಿಯಮಗಳು ಈಗಿರುವಂತೆ ಮುಂದುವರೆಯಲಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಅವರು, ತಜ್ಞರ ಸಲಹೆಯ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಿವರಿಸಿದರು.
previous post