ನ್ಯೂಸ್ ನಾಟೌಟ್: ಬೆಂಗಳೂರಿನ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಂಭೀರ ಪ್ರಕರಣದಲ್ಲಿ, ಗಂಡನ ಹತ್ಯೆ ಪ್ರಕರಣವನ್ನು ಪತ್ತೆ ಹಚ್ಚಿದ್ದು ಅವನ ಪತ್ನಿಯೇ ಎಂಬುದು ವಿಶೇಷ. ದೀಪಕ್ ಎಂಬ ನೇಪಾಳ ಮೂಲದ ಯುವಕನ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮೊದಲು ನಿರ್ಲಕ್ಷ್ಯ ತೋರಿದ್ದರೂ ಎಂದು ಆರೋಪಿಸಲಾಗಿದೆ. ಪತ್ನಿ ಸುಷ್ಮಾ ನಿರಂತರ ಪರಿಶ್ರಮ ಮತ್ತು ಹೋರಾಟದಿಂದ ಕೊನೆಗೂ ಕೊಲೆ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿ ಆಗಿದ್ದಾರೆ ಎನ್ನಲಾಗಿದೆ. ನಂತರ ಪೊಲೀಸರೇ ಆಕೆಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮೇ 1 ರಂದು ವರ್ತೂರಿನಲ್ಲಿ ಮೋರಿಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮೃತ ದೇಹದ ಗುರುತನ್ನು ಪತ್ನಿ ಸುಷ್ಮಾ ದೃಢಪಡಿಸಿದ್ದರು. ಎದೆ ಭಾಗದಲ್ಲಿ ಗಾಯವಿದ್ದ ಕಾರಣದಿಂದ ಇದು ಸಹಜ ಸಾವಲ್ಲ ಕೊಲೆ ಎಂದು ಆತನ ಪತ್ನಿ ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಪೊಲೀಸರು ಯುಡಿಆರ್ (ಅಸಹಜ ಮರಣ ವರದಿ) ಎಂದು ಪ್ರಕರಣ ದಾಖಲಿಸಿ, ತನಿಖೆಗೆ ಕೈಹಾಕಲು ಮುಂದಾಗಿರಲಿಲ್ಲ ಎನ್ನಲಾಗಿದೆ.
ಆದರೆ, ಆತನ ಪತ್ನಿ ಸುಷ್ಮಾ ಮಾತ್ರ ಕೈಕಟ್ಟಿ ಕುಳಿತುಕೊಳ್ಳಲಿಲ್ಲ. ಗಂಡನ ಸಾವಿನ ಬಗ್ಗೆ ಕೊಲೆಯ ಶಂಕೆಯನ್ನು ನಿಲ್ಲಿಸದೆ, ಯಾರು ಮಾಡಿರಬಹುದು ಎಂಬುದನ್ನು ಪತ್ತೆ ಮಾಡಲು ತಾನೇ ಮುಂದಾಗಿದ್ದಾಳೆ. ಈ ವೇಳೆ, ಜೂನ್ 5ರಂದು ಸಂಬಂಧಿ ಕರುಣ್ ಸಿಂಗ್ ಗೆ ಆರೋಪಿ ಇಂದ್ರ ಬಿಸ್ಪಾ ತಾನೇ ಕೊಲೆ ಮಾಡಿದ್ದೇನೆ ಎಂದು ದೂರವಾಣಿ ಮೂಲಕ ಒಪ್ಪಿಕೊಂಡಿದ್ದಾನೆ. ಇದನ್ನು ಸಂಬಂಧಿ ಈಕೆಗೆ ಹೇಳಿದ್ದಾರೆ, ಈ ಮಾಹಿತಿಯನ್ನು ಕರುಣ್ ಸಿಂಗ್ ಕರೆ ಮಾಡಿ ಸುಷ್ಮಾಳಿಗೆ ತಿಳಿಸಿದ ನಂತರ, ಸುಷ್ಮಾ ವರ್ತೂರು ಪೊಲೀಸರಿಗೆ ದೂರನ್ನು ಸಲ್ಲಿಸಿದ್ದಾರೆ. ಈ ಹಿಂದೆ ಆರೋಪಿಯನ್ನು ಕಂಡು ಹಿಡಿಯಲು ಆಕೆ ಸಂಬಂಧಿಕರ ಸಹಾಯ ಪಡೆದು ಹಲವು ಕಡೆ ಸೂಕ್ಷ್ಮವಾಗಿ ಮಾಹಿತಿ ಕಲೆ ಹಾಕಿದ್ದಾಳೆ ಮತ್ತು ಸಾಕ್ಷಿಗಳನನ್ನು ಒದಗಿಸಿದ್ದಾಳೆ.
ಪತ್ನಿಯ ಪರಿಶ್ರಮದ ಫಲವಾಗಿ, ಈಗಾಗಲೇ ಇಂದ್ರ ಬಿಸ್ಪಾ ಎಂಬಾತನನ್ನು ಪೊಲೀಸರು ಬಂಧಿಸಿ, ಕೊಲೆ ಪ್ರಕರಣದ ತನಿಖೆಗೆ ಚುರುಕು ನೀಡಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಏಪ್ರಿಲ್ 11ರಂದು ದೀಪಕ್ ಮತ್ತು ಪತ್ನಿ ಸುಷ್ಮಾ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳದ ಮಧ್ಯೆ ಬಂದು ಇಬ್ಬರನ್ನು ತಡೆಯಲು ಪ್ರಯತ್ನಿಸಿದ ಸಂಬಂಧಿ ಇಂದ್ರ ಬಿಸ್ಪಾಗೆ, ದೀಪಕ್ ಹೊಡೆದಿದ್ದನು. ಈ ಕೋಪದಲ್ಲಿ ಆತನು ದೀಪಕ್ ನನ್ನು ಕೊಂದು ಮೋರಿಯಲ್ಲಿ ಎಸೆದಿದ್ದನು, ಇದು ಕ್ಷುಲ್ಲಕ ಕಾರಣಕ್ಕೆ ದ್ವೇಷದ ಕೊಲೆ ಎಂದು ಗೊತ್ತಾಗಿದೆ ಎನ್ನಲಾಗಿದೆ.
ರಾಮ್ ಚರಣ್ ನಿರ್ಮಾಣದ ಸಿನಿಮಾ ಸೆಟ್ ನಲ್ಲಿ ಜಲ ಅವಘಡ..! ಹಲವರಿಗೆ ಗಾಯ, ವಿಡಿಯೋ ವೈರಲ್