ಕ್ರೈಂದೇಶ-ವಿದೇಶವೈರಲ್ ನ್ಯೂಸ್

ಹೆಂಡತಿಯನ್ನು ಕರೆದೊಯ್ಯಲು ಬಂದವ ಅತ್ತೆಯನ್ನೇ ಕೊಂದ..! ಗಂಭೀರವಾಗಿ ಗಾಯಗೊಂಡ ಮಾವ ಆಸ್ಪತ್ರೆಗೆ ದಾಖಲು..!

215

ನ್ಯೂಸ್ ನಾಟೌಟ್: ಗಂಡನೊಂದಿಗೆ ಜಗಳವಾಡಿಕೊಂಡು ಹೆಂಡತಿ ತವರು ಮನೆ ಸೇರಿದ್ದಕ್ಕೆ ಕೋಪಗೊಂಡ ಪತಿ, ಹೆಂಡತಿಯನ್ನ ಕರೆತರಲು ತವರು ಮನೆಗೆ ಬಂದಿದ್ದಾನೆ. ಈ ವೇಳೆ ನಡೆದ ಜಗಳದಲ್ಲಿ ಅಳಿಯ ಅತ್ತೆ ಹಾಗೂ ಮಾವನ ಮೇಲೆ ಮಚ್ಚಿನಿಂದ ದಾಳಿ ಮಾಡಿದ್ದಾನೆ. ಘಟನೆಯಲ್ಲಿ ಅತ್ತೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮಾವ ಆಸ್ಪತ್ರೆಗೆ ದಾಖಲಾಗಿದ್ದು, ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಿಂಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

43 ವರ್ಷದ ಕವಿತಮ್ಮ ಮೃತ ಹೆಂಗಸು ಎಂದು ಗುರುತಿಸಲಾಗಿದೆ. 25 ವರ್ಷದ ಚಂದ್ರು ಕೊಲೆ ಮಾಡಿರುವ ಅಳಿಯ. ಇನ್ನೂ ಘಟನೆಯಲ್ಲಿ ತಲೆಗೆ ಗಂಭೀರ ಪೆಟ್ಟು ಮಾಡಿಕೊಂಡಿರುವ ಮಾವ ಈಶ್ವರಪ್ಪ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸಲಿಗೆ ಈಶ್ವರಪ್ಪ ತನ್ನ ಸಹೋದರಿ ಯಶೋಧಮ್ಮ ಪುತ್ರ ಚಂದ್ರುವಿಗೆ ತನ್ನ ಮಗಳು ಮಮತಾಳನ್ನ ಕೊಟ್ಟು ಮದುವೆ ಮಾಡಿಸಿದ್ದರು. ಆದ್ರೆ ಇಬ್ಬರ ನಡುವೆ ಆಸ್ತಿ ವಿವಾದ ಇದ್ದರಿಂದ ಮಮತಾಳಿಗೆ ಗಂಡ ಚಂದ್ರು ಹಾಗೂ ಆಕೆಯ ಆತ್ತೆ ಯಶೋಧಮ್ಮ ಕಿರುಕುಳ ಕೊಡುತ್ತಿದ್ದರಂತೆ. ಇದರಿಂದ ಮನನೊಂದ ಮಮತಾ 10 ದಿನಗಳ ಹಿಂದೆ ತವರು ಮನೆಗೆ ವಾಪಸ್ಸಾಗಿದ್ದಳು.

ಮಂಗಳವಾರವಷ್ಟೇ (ಅ.8) ಮಮತಾಳನ್ನ ಕರೆದುಕೊಂಡು ಹೋಗಲು ಚಂದ್ರು ಆಕೆಯ ತವರು ಮನೆಗೆ ಬಂದಿದ್ದಾರೆ. ಈ ವೇಳೆ ತನ್ನ ಹೆಂಡತಿಯನ್ನು ಜೊತೆಗೆ ಕಳುಹಿಸಿಕೊಡುವಂತೆ ಅತ್ತೆ ಮಾವನನ್ನ ಕೇಳಿದ್ದಾನೆ. ಜೊತೆಗೆ ಆಸ್ತಿಯನ್ನು ಭಾಗ ಕೊಡುವಂತೆಯೂ ಕೇಳಿದ್ದನಂತೆ. ಈ ವೇಳೆ ಮಾತಿಗೆ ಮಾತು ಬೆಳೆದು ಅಳಿಯ ಚಂದ್ರು ಮಚ್ಚಿನಿಂದ ಅತ್ತೆ-ಮಾವನ ಮೇಲೆ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಪ್ರಕರಣ ದಾಖಲಾಗಿದೆ.

See also  ಸೂಪರ್ ಸ್ಟಾರ್ ವಿಜಯ್ ಮೇಲೆ ಚಪ್ಪಲಿ ಎಸೆದ್ಯಾರು..? ವಿಜಯ್ ಕಾಂತ್ ಅಂತ್ಯಸಂಸ್ಕಾರದ ವೇಳೆ ಅಂತದ್ದೇನಾಯ್ತು..? ಇಲ್ಲಿದೆ ವೈರಲ್ ವಿಡಿಯೋ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget