ಕ್ರೈಂ

ನಿನಗೆ ಕೆಲಸವಿಲ್ಲ,ಸೌಂದರ್ಯವಿಲ್ಲ,ವರದಕ್ಷಿಣೆಯೂ ಇಲ್ಲ! ಕಿರುಕುಳ ತಾಳಲಾರದೇ ವಿವಾಹಿತೆ ನೇಣಿಗೆ ಶರಣು

ನ್ಯೂಸ್‌ ನಾಟೌಟ್‌: ಸೌಂದರ್ಯ ಕಡಿಮೆ, ಕೆಲಸವಿಲ್ಲ, ವರದಕ್ಷಿಣೆ ಕಡಿಮೆ ಎಂದು ಕಿರುಕುಳ ಅನುಭವಿಸುತ್ತಿದ್ದ ಮಹಿಳೆ ಮನನೊಂದು ನೇಣಿಗೆ ಶರಣಾದ ಘಟನೆ ಬಗ್ಗೆ ವರದಿಯಾಗಿದೆ. ಕೇರಳದ ಮಲಪ್ಪುರಂನಲ್ಲಿ ಈ ದುರ್ಘಟನೆ ನಡೆದಿದ್ದು,ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸದ್ಯ ಗಂಡ ಪ್ರಭಿನ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪೂಕ್ಕೋಟ್ಟುಂಪಾಡಂ ಮೂಲದ ವಿಷ್ಣುಜಾ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. 2023ರ ಮೇ ತಿಂಗಳಲ್ಲಿ ವಿಷ್ಣುಜಾ ಮತ್ತು ಎಳಂಕೂರು ಮೂಲದ ಪ್ರಭಿನ್‌ರ ವಿವಾಹ ನೆರವೇರಿತ್ತು. ಗಂಡನ ಕಿರುಕುಳದಿಂದಲೇ ಮಗಳ ಸಾವು ಆಗಿದೆ ಎಂದು ವಿಷ್ಣುಜಾ ಕುಟುಂಬ ಗಂಭೀರ ಆರೋಪವನ್ನು ಮಾಡಿದೆ.

ಆದರೆ ಈ ಆರೋಪವನ್ನು ಪ್ರಭಿನ್ ಕುಟುಂಬ ತಳ್ಳಿ ಹಾಕಿದೆ. ಪ್ರಭಿನ್ ಮತ್ತು ವಿಷ್ಣುಜಾ ನಡುವೆ ಕೆಲವು ಭಿನ್ನಾಭಿಪ್ರಾಯಗಳಿದ್ದವು. ಇದಕ್ಕೆ ಕಾರಣ ತಿಳಿದಿಲ್ಲ ಎಂದು ಪ್ರಭಿನ್ ಕುಟುಂಬ ಹೇಳಿದೆ. ವರದಕ್ಷಿಣೆ ಕೇಳಿಲ್ಲ ಅಥವಾ ಪಡೆದಿಲ್ಲ ಎಂದು ಪ್ರಭಿನ್ ಕುಟುಂಬಸ್ಥರು ಆರೋಪಿಸಿದ್ದಾರೆ. 

ಗಂಡನ ಮನೆಯಲ್ಲಿ ಮಗಳಿಗೆ ತೀವ್ರ ಮಾನಸಿಕ ಕಿರುಕುಳ ನೀಡಲಾಗುತ್ತಿತ್ತು. ಮದುವೆಯಾದ ಕೆಲವು ವಾರಗಳಲ್ಲೇ ಪ್ರಭಿನ್ ಕಿರುಕುಳ ನೀಡಲು ಪ್ರಾರಂಭಿಸಿದ. ಕೆಲಸವಿಲ್ಲದ ಕಾರಣಕ್ಕೆ ಕಿರುಕುಳ ನೀಡಲಾಗುತ್ತಿತ್ತು. ತಂದೆ-ತಾಯಿಗೆ ತೊಂದರೆ ಕೊಡಬಾರದು ಎಂದು ಮಗಳು ಎಲ್ಲವನ್ನೂ ಮುಚ್ಚಿಟ್ಟಳು. ಮಗಳನ್ನು ಬೈಯ್ಯುವ ವಾಯ್ಸ್ ನೋಟ್‌ಗಳು ನನ್ನ ಬಳಿ ಇವೆ. ಸೌಂದರ್ಯ ಕಡಿಮೆ, ಕೆಲಸವಿಲ್ಲ, ವರದಕ್ಷಿಣೆ ಕಡಿಮೆ ಎಂದು ಹೇಳಿ ವಿಷ್ಣುಜಾಳಿಗೆ ಗಂಡ ಕಿರುಕುಳ ನೀಡುತ್ತಿದ್ದ ಎಂದು ಕುಟುಂಬ ಆರೋಪಿಸಿದೆ.

ಇದಕ್ಕೆಲ್ಲ ಗಂಡನ ಸಂಬಂಧಿಕರು ಸಹಕರಿಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಗಂಡ ಮತ್ತು ಆತನ ಕುಟುಂಬದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಯುವತಿಯ ಕುಟುಂಬ ಒತ್ತಾಯಿಸಿತ್ತು. ಇದರ ಬೆನ್ನಲ್ಲೇ ಮಂಜೇರಿ ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದಾರೆ. 

Related posts

‘ಪುಷ್ಪ 2’ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ ಲೀಕ್..! ಕಾನೂನು ಕ್ರಮ ಕೈಗೊಳ್ಳುವಂತೆ ಅಭಿಮಾನಿಗಳ ಒತ್ತಾಯ..!

ಸುಳ್ಯ: ಮೊಬೈಲ್ ರೀಚಾರ್ಜ್ ಮಾಡಲು ಬಂದ ಹಿಂದೂ ಹುಡುಗಿಯ ಫೋಟೋ ತೆಗೆದ ಮುಸ್ಲಿಂ ಯುವಕ, ರೊಚ್ಚಿಗೆದ್ದ ಯುವತಿಯ ಮನೆಯವರಿಂದ ಪೊಲೀಸರಿಗೆ ದೂರು

ಬಿಜೆಪಿ ಶಾಸಕನಿಂದ ಕಾಂಗ್ರೆಸ್ ಅಭ್ಯರ್ಥಿಗೆ ಮತ..! ಎಸ್​ಟಿ ಸೋಮಶೇಖರ್ ವಿರುದ್ಧ ಕಾನೂನು ಕ್ರಮ..!