ಕ್ರೈಂ

ಆಕಸ್ಮಿಕವಾಗಿ ಕೆರೆಗೆ ಬಿದ್ದು ಯುವತಿ ಸಾವು, ದೇವರಿಗೆ ಹೂವು ಕೊಯ್ಯಲು ಹೋದಾಗ ಸಂಭವಿಸಿದ ದುರ್ಘಟನೆ

795

ಬಂಟ್ವಾಳ: ದೇವರಿಗೆ ಹೂ ಕೊಯ್ಯಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಯುವತಿಯೊಬ್ಬಳು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಮೃತಳನ್ನು ಬಂಟ್ವಾಳ ತಾಲ್ಲೂಕಿನ ಸಜೀಪ ಮೂಡ ವ್ಯಾಪ್ತಿಯ ಕಾರಾಜೆ ನಿವಾಸಿ ಲಿಂಗಪ್ಪ ಮೂಲ್ಯ ಅವರ ಪುತ್ರಿ ರಶ್ಮಿತಾ ಎಂದು ಗುರುತಿಸಲಾಗಿದೆ.

ಏನಿದು ಘಟನೆ?
ಮೃತ ರಶ್ಮಿತಾ ಇಂದು ಮುಂಜಾನೆ ದೇವರಿಗೆ ಹೂ ಕೊಯ್ಯಲೆಂದು ತೆರಳಿದ್ದ ಸಂದರ್ಭದಲ್ಲಿ ಕೆರೆ ಬಳಿ ಹೋಗಿದ್ದು, ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಬೆಂಗಳೂರಿಗೆ ಕೆಲಸ ಹುಡುಕಿ ಬರುವವರೇ ಎಚ್ಚರ..!ನೌಕರಿ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ! 16 ಕ್ರೆಡಿಟ್ ಕಾರ್ಡ್‌ ಮತ್ತು ಚೆಕ್ ಬುಕ್ ಗಳು ಪತ್ತೆ!
  Ad Widget   Ad Widget   Ad Widget   Ad Widget   Ad Widget   Ad Widget   Ad Widget