ಇತರಜೀವನ ಶೈಲಿ/ಆರೋಗ್ಯಜೀವನಶೈಲಿಬೆಂಗಳೂರುಮಹಿಳೆ-ಆರೋಗ್ಯವೈರಲ್ ನ್ಯೂಸ್

ಮತಗಟ್ಟೆ ಬಳಿ ಮಹಿಳೆಗೆ ಹೃದಯ ಸ್ತಂಭನ..! ಜೀವ ಉಳಿಸಿದ ಮತದಾನ ಮಾಡಲು ಬಂದ ವೈದ್ಯ

146

ನ್ಯೂಸ್ ನಾಟೌಟ್: ಲೋಕಸಭೆ ಚುನಾವಣೆ ಹಿನ್ನೆಲೆ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಗೆ ಮತದಾನ ಮಾಡಲು ಆಗಮಿಸಿದ ಮಹಿಳೆಯ ಹೃದಯ ಸ್ತಂಭನವಾಗಿದ್ದು (Cardiac Arrest), ಇದೇ ಮತಗಟ್ಟೆಗೆ ಮತದಾನ ಮಾಡಲು ಬಂದ ವೈದ್ಯ ಜೀವ ಉಳಿಸಿದ್ದಾರೆ.

ಬೆಳಿಗ್ಗೆ 11 ಗಂಟೆ ಸುಮಾರಿಗೆ ಮಹಿಳೆ ಮತದಾನ ಮಾಡಲು ಬಂದಿದ್ದರು. ಈ ವಳೇ ಮಹಿಳೆಯ ಹೃದಯ ಸ್ತಂಭನವಾಗಿದೆ. ಇದೇ ಮತಗಟ್ಟೆಗೆ ಮತದಾನ ಮಾಡಲು ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಜೀವ ಉಳಿಸಿದ್ದಾರೆ. 50 ಆಸುಪಾಸಿನ ಮಹಿಳೆಯೊಬ್ಬರು ಕ್ಯಾನ್‌ನಲ್ಲಿ ನೀರು ಕುಡಿಯಲು ಬಂದಿದ್ದರು. “ನಾನು ಅವರ ನಾಡಿಮಿಡಿತವನ್ನು ಪರಿಶೀಲಿಸಿದೆ. ನಾಡಿಮಿಡಿತ ತುಂಬಾ ಕಡಿಮೆಯಾಗಿದೆ ಅಂತ ಕಂಡುಬಂತು. ಕಣ್ಣುಗಳು ಮೇಲಕ್ಕೆತ್ತಿ ಧಿಡೀರನೆ ಕುಸಿದರು. ಅವರ ದೇಹದಲ್ಲಿ ಚಲನವಲನ ಇರಲಿಲ್ಲ. ಅವರು ಉಸಿರುಗಟ್ಟುತ್ತಿದ್ದರು. ನಾನು ತಕ್ಷಣ ಸಿಪಿಆರ್ ಮಾಡಿದೆ. ಸ್ವಲ್ಪ ಗುಣಮುಖರಾದರು. ಅವರ ಸ್ಥಿತಿ ಸುಧಾರಿಸಿತು. ಬಳಿಕ ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದರು. ಆಂಬ್ಯುಲೆನ್ಸ್​ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. 5 ನಿಮಿಷ ವಿಳಂಬವಾಗಿದ್ದರೂ ನಾವು ಅವರನ್ನು ಕಳೆದುಕೊಳ್ಳುತ್ತಿದ್ದೇವು ಎಂದು ವೈದ್ಯ ಹೇಳಿದ್ದಾರೆ.

See also  ಕುಡಿದು ಯುವತಿಯಿಂದ ಬಸ್ಸ್ ನೊಳಗೆ ದಾಂಧಲೆ..! ಸರ್ಕಾರಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ
  Ad Widget   Ad Widget     Ad Widget   Ad Widget   Ad Widget   Ad Widget