ಕಲೆ/ವಿಜ್ಞಾನ

ಯಕ್ಷಗಾನ ವೇಷ ಧರಿಸಿ ಮತದಾನದ ಬಗ್ಗೆ ಜಾಗೃತಿ..! ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳ ಕಾರ್ಯಕ್ಕೆ ಶ್ಲಾಘನೆ!!

225

ನ್ಯೂಸ್‌ ನಾಟೌಟ್‌ : ಇನ್ನೇನು ಚುನಾವಣೆ ದಿನಾಂಕ ಸಮೀಪಿಸುತ್ತಿದೆ.ರಾಜಕೀಯ ಪಕ್ಷಗಳು ಮತ ಯಾಚನೆಯಲ್ಲಿ ಬ್ಯುಸಿಯಾಗಿದ್ದಾವೆ.ಹೀಗಾಗಿ ಏಪ್ರಿಲ್ 26 ರಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತ್ತು ಮೇ 7 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ(ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರ) ಮತದಾನ ಪ್ರಮಾಣ ಹೆಚ್ಚಿಸಲು ಉಡುಪಿ ಜಿಲ್ಲೆಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮಗಳು ಜೋರಾಗಿ ನಡೆಯುತ್ತಿವೆ.

ಈ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಯಲ್ ನೇತೃತ್ವದ ಉಡುಪಿ ಜಿಲ್ಲಾ SVEEP(ಸ್ವೀಪ್) ಸಮಿತಿಯು ಮತದಾನದ ಬಗ್ಗೆ ಜಾಗೃತಿ ಮೂಡಿಸಲು ವಿಶಿಷ್ಟ ಉಪಕ್ರಮಗಳನ್ನು ತೆಗೆದುಕೊಂಡಿದೆ. ಅದರಲ್ಲಿ ಯಕ್ಷಗಾನದ ಮೂಲಕ ಜಾಗೃತಿ ಮೂಡಿಸಿ ಗಮನ ಸೆಳೆದಿದ್ದು ವಿಶೇಷವೆಂಬಂತಿದೆ.ಪ್ರತೀಕ್ ಬಯಲ್, ಕುಂದಾಪುರ ಎಸಿ ರಶ್ಮಿ, ಉಡುಪಿ ಎಡಿಸಿ ಮಮತಾದೇವಿ ಜಿ ಎಸ್ ಮತ್ತು ಕರಾವಳಿ ಭದ್ರತಾ ಪೊಲೀಸ್(CSP) ವರಿಷ್ಠಾಧಿಕಾರಿ ಮಿಥುನ್ ಎಚ್ ಎನ್ ಅವರು ಯಕ್ಷಗಾನ ಕಲಾವಿದರ ವೇಷಭೂಷಣವನ್ನು ಧರಿಸಿ ಜಿಲ್ಲೆಯ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಶೇ.100 ಮತದಾನಕ್ಕೆ‌, ಮತದಾನದ ಮಹತ್ವವನ್ನು ಸಾರಿ ಎಲ್ಲರೂ‌ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಂಡು ಮತದಾನ ಮಾಡುವಂತೆ ಕರೆ ನೀಡಿದರು.ಐಎಎಸ್, ಐಪಿಎಸ್ ಮತ್ತು ಕೆಎಎಸ್ ಅಧಿಕಾರಿಗಳು ಸುಮಾರು ಐದು ಗಂಟೆಗಳ ಕಾಲ ಯಕ್ಷಗಾನ ವೇಷಭೂಷಣವನ್ನು ಧರಿಸಿ ಖುಷಿ ಪಟ್ಟರು. ಏಕೆಂದರೆ ಈ ಎಲ್ಲಾ ಅಧಿಕಾರಿಗಳು ಮೊದಲ ಬಾರಿಗೆ ಯಕ್ಷಗಾನ ವೇಷಭೂಷಣವನ್ನು ಧರಿಸಿದ್ದು, ಎಲ್ಲರ ಗಮನ ಸೆಳೆಯುವಂತೆ ಮಾಡಿತ್ತು.

  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget