ರಾಜಕೀಯವೈರಲ್ ನ್ಯೂಸ್

ಯತ್ನಾಳ್‌ಗೆ ಹುಚ್ಚು ನಾಯಿ ಎಂದ್ರಾ ರೇಣುಕಾಚಾರ್ಯ..? ಏನಿದು ಸ್ವಪಕ್ಷೀಯರ ಗುದ್ದಾಟ..?

177

ನ್ಯೂಸ್ ನಾಟೌಟ್ : ರೇಣುಕಾಚಾರ್ಯಗೆ ಸಾಕಿದ ನಾಯಿ ಎಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಯತ್ನಾಳರದ್ದು ಯಾವಾಗಲೂ ಅಶ್ಲೀಲ ಪದ ಬಳಸುವುದೇ ಚಾಳಿ. ಅಂತವರ ಬಗ್ಗೆ ಮಾತಾಡೋಕೆ ನನಗೆ ಅಸಹ್ಯ ಅನಿಸುತ್ತೆ, ನಾಚಿಕೆ ಆಗುತ್ತೆ ಎಂದು ತಿರುಗೇಟು ನೀಡಿದ್ದಾರೆ.

ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ, ಶಾಸಕ ಯತ್ನಾಳ್ ವಿರುದ್ದ ಹರಿಹಾಯ್ದಿದ್ದಾರೆ. ಆನೆ ಬೀದಿಗೆ ಇಳಿದಾಗ ಹುಚ್ಚು ನಾಯಿ ಬೊಗಳುತ್ತವೆ. ಅವುಗಳು ಬೊಗಳಿದರೆ ಆನೆಯ ತೂಕವೇನು ಕಡಿಮೆಯಾಗಲ್ಲ. ಹೀಗೆ ಯತ್ನಾಳ್ ಕೂಡ ಮಾತಾನಾಡುತ್ತಾರೆ. ಅವರು ಮಾತಾಡುವುದರಿಂದ ಯಡಿಯೂರಪ್ಪನ ತೂಕವೇನು ಕಡಿಮೆಯಾಗಲ್ಲ ಎಂದಿದ್ದಾರೆ.

ಮಾತು ಮುಂದುವರಿಸಿದ ರೇಣುಕಾಚಾರ್ಯ, ನಾಯಿಗೆ ಇರುವ ನಿಯತ್ತು ಕೂಡ ಆ ಮನುಷ್ಯನಿಗೆ ಇಲ್ಲ. ನಿಮ್ಮನ್ನ ಬಿಜೆಪಿಗೆ ಕರೆ ತಂದದ್ದು ಯಡಿಯೂರಪ್ಪ, ಕೇಂದ್ರ ಮಂತ್ರಿ ಮಾಡಿದ್ದು ಯಡಿಯೂರಪ್ಪ. ಈತ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಬೆಳಕು ಚಲ್ಲಬೇಕಿತ್ತು. ಅದನ್ನು ಬಿಟ್ಟು ಕೇವಲ ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ಒಳಗು ಹೊರಗು ಅದನ್ನೇ ಮಾತಾಡಿದ್ದಾರೆ. ಈ ಮನುಷ್ಯನಿಗೆ ಮೆದುಳು ಮತ್ತು ನಾಲಿಗೆಗೂ ಲಿಂಕ್ ಇಲ್ಲ. ಆತನಿಗೆ ಗೌರವ ಕೊಡ್ತಿದ್ದೆ ಇನ್ಮುಂದೆ ಕೊಡಲ್ಲ ಎಂದು ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ.

ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡಿದ್ದು ಯಡಿಯೂರಪ್ಪ ಅಲ್ಲ. ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ, ಸಂತೋಷ್ ಜೀ ಮಾಡಿದ್ದಾರೆ. ಇನ್ನು ಮುಂದೆ ವಿಜಯೇಂದ್ರ ಬಗ್ಗೆ ಮಾತಾಡಿದ್ರೆ ಮೋದಿ, ಶಾ ವರಿಷ್ಠರಿಗೆ ಅಪಮಾನ ಮಾಡಿದಂತೆ. ಇಂತವರನ್ನ ನೋಡಿನೇ ಸರ್ವಜ್ಞ ವಚನಗಳನ್ನ ಬರೆದಿದ್ದಾನೆ ಅನಿಸತ್ತೆ.

ಹುಚ್ಚು ನಾಯಿ ಬೊಗಳಿದರೆ ದೇವಲೋಕ ಹಾಳಾಗಲ್ಲ. ಹಾಗೆ ಇದು ಕೂಡ ಹುಚ್ವು ನಾಯಿ ಇದ್ದಂತೆ ಎಂದ ರೇಣುಕಾಚಾರ್ಯ, ಹುಚ್ಚು ನಾಯಿ ಬಗ್ಗೆ ಮಾತಾಡೋದೆ ವೇಸ್ಟ್ ಎಂದು ಯತ್ನಾಳ್ ಗೆ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ ಎನ್ನಲಾಗಿದೆ.

See also  ಜ್ಯೋತಿಷಿಯ ಮಾತು ಕೇಳಿ ಪತ್ನಿ ಮತ್ತು 3 ಮಕ್ಕಳನ್ನು ಗುಂಡಿಕ್ಕಿ ಕೊಂದ ಭೂಪ..! ಮತ್ತೊಂದು ಮದುವೆಯಾಗುವ ವಿಚಾರಕ್ಕೆ ದಂಪತಿ ನಡುವೆ ಕಲಹ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget