Latestರಾಜಕೀಯರಾಜ್ಯವೈರಲ್ ನ್ಯೂಸ್

ಯತ್ನಾಳ್‍ ರನ್ನು ನಾನೇ ಕಾಂಗ್ರೆಸ್‍ ಗೆ ಕರೆದ್ಕೊಂಡು ಬರುತ್ತೇನೆ ಎಂದ ಶಾಸಕ..! ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ ಎಂದ ಕಾಂಗ್ರೆಸ್ ಮುಖಂಡ..!

1k

ನ್ಯೂಸ್‌ ನಾಟೌಟ್: ಯತ್ನಾಳ್ ಕಾಂಗ್ರೆಸ್‌ ಗೆ ಬಂದ್ರೆ ಕರೆದುಕೊಳ್ಳುತ್ತೇವೆ ಎಂದು ಶಾಸಕ ರಾಜು ಕಾಗೆ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ, ಈ ವೇಳೆ, ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಬಿಜೆಪಿ ಉಚ್ಚಾಟಿಸಿದ ಬಗ್ಗೆ ಪ್ರತಿಕ್ರಿಸಿದರು. ನಾನೇ ಯತ್ನಾಳ್‍ ರನ್ನ ಕಾಂಗ್ರೆಸ್‍ ಗೆ ಕರೆದುಕೊಂಡು ಬರುತ್ತೇನೆ. ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ ಎಂದಿದ್ದಾರೆ.

ಬೆಲೆ ಏರಿಕೆ ವಿಚಾರವಾಗಿ, ಬೆಲೆ ಏರಿಕೆ ಅಷ್ಟು ಹೊರೆ ಆಗುವುದಿಲ್ಲ. ನಮಗೂ ಇತಿ ಮಿತಿ ಇದೆ. ಹೊಸ ಬಸ್ ನಿಲ್ದಾಣದ ನಿರ್ಮಾಣ, ಹೊಸ ಬಸ್ ಖರೀದಿ ಮಾಡುತ್ತಿದ್ದೆವೆ. ವ್ಯವಸ್ಥೆಯನ್ನು ಸರಿ ಮಾಡಬೇಕು. ನಷ್ಟವಿಲ್ಲದೇ ಸಂಸ್ಥೆ ನಡೆಯಬೇಕು ಎಂದು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಕಾಂಗ್ರೆಸ್‍ನ ಐದು ಗ್ಯಾರಂಟಿ ಜನರಿಗೆ ಉಪಯೋಗ ಆಗುತ್ತಿದೆ. ಯಾರು ವಿರೋಧ ಮಾಡುತ್ತಿದ್ದರೋ ಅವರೇ ಈಗ ನಮ್ಮನ್ನು ನಕಲು ಮಾಡುತ್ತಿದ್ದಾರೆ. ಇನ್ನೂ ಸರ್ಕಾರದಲ್ಲಿ ಅಡೆತಡೆಗಳು ಸಹಜ. ಇದೆಲ್ಲ ಮೀರಿ ಸಿಎಂ ಸಿದ್ದರಾಮಯ್ಯ ಪಾರದರ್ಶಕವಾಗಿ ಆಡಳಿತ ನಡೆಸುತ್ತಿದ್ದಾರೆ ಎಂದರು.

 

See also  ವಿಮಾನ ಮಿಸ್ ಆಯ್ತೆಂದು ರನ್‌ ವೇ ಯಲ್ಲಿ ಓಡಿದ ಈ ಮಹಿಳೆ ಯಾರು? ಆಕೆಯನ್ನು ಬಂಧಿಸಿದ್ದೇಕೆ ಪೊಲೀಸರು?
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget