Latestದೇಶ-ವಿದೇಶರಾಜಕೀಯರಾಜ್ಯವೈರಲ್ ನ್ಯೂಸ್

ಯತ್ನಾಳ್‌ ಉಚ್ಛಾಟನೆ ವಿರೋಧಿಸಿ ಹಲವರು ರಾಜೀನಾಮೆ..! ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಬೆನ್ನಲ್ಲೇ ಯತ್ನಾಳ್ ಬೆಂಬಲಿಗರಿಂದ ಪ್ರತಿಭಟನೆಗೆ ತಯಾರಿ..!

985

ನ್ಯೂಸ್ ನಾಟೌಟ್: ಬಿಜಿಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ವಿಜಯಪುರ ಜಿಲ್ಲಾ ಬಿಜೆಪಿಯಲ್ಲಿ ಸಾಲು ಸಾಲು ರಾಜೀನಾಮೆಗಳು ಆಗುತ್ತಿವೆ.

ಜಿಲ್ಲಾ ಬಿಜೆಪಿ ನಗರ ಮಂಡಲ ಅಧ್ಯಕ್ಷ ಸೇರಿದಂತೆ ಅನೇಕ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಜೊತೆಗೆ ಜಿಲ್ಲಾ ಕಾರ್ಯದರ್ಶಿ ಸಿದ್ದು ಹೆಬ್ಬಾಳ ಎಂಬವರು ಕೂಡ ರಾಜೀನಾಮೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ.

ಹಿಂದೂ ಫೈರ್‌ ಬ್ರ್ಯಾಂಡ್, ಹಿಂದೂತ್ವದ ಗಟ್ಟಿಧ್ವನಿಯ ಉಚ್ಛಾಟನೆಯನ್ನ ಖಂಡಿಸುತ್ತೇವೆ ಎಂದಿರುವ ಸಿದ್ದು ಹೆಬ್ಬಾಳ ರಾಜೀನಾಮೆ ಪತ್ರ ಬರೆದು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ರವಾನಿಸಿದ್ದಾರೆ.

ಇನ್ನೂ ಯತ್ನಾಳ್‌ ಉಚ್ಛಾಟನೆ ಮಾಡಿರುವ ಹೈಕಮಾಂಡ್‌ ನಿರ್ಧಾರವನ್ನು ತೀವ್ರವಾಗಿ ಖಂಡಿಸಿರುವ ಯತ್ನಾಳ್‌ ಬೆಂಬಲಿಗರು ಪ್ರತಿಭಟನೆಗೆ ಸಜ್ಜಾಗಿದ್ದಾರೆ ಎನ್ನಲಾಗಿದೆ.

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಬೆನ್ನಲ್ಲೇ ನಗರದಲ್ಲಿ ಕೆಲ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ನಗರದ ಶಾಹುನಗರದ ಕಾಳಿಕಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪಟಾಕಿ ಸಿಡಿಸಿ ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮ ಆಚರಿಸಿದ್ದಾರೆ.

ಇದನ್ನೂ ಓದಿಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ವಿನಯ್ ಮತ್ತು ರಜತ್ 3 ದಿನ ಪೊಲೀಸ್ ಕಸ್ಟಡಿಗೆ..! ಪಬ್ಲಿಕ್​ ಪ್ರಾಸಿಕ್ಯೂಟರ್ ಹೇಳಿದ್ದೇನು..?

See also  ಕಾರ್ಕಳ: ಬಿಜೆಪಿ ತೊರೆದು ಕಾಂಗ್ರೆಸ್ ಗೆ ಕಾಲಿಟ್ಟ ಆನಂದ ಪೂಜಾರಿ
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget