ಕರಾವಳಿರಾಜಕೀಯವೈರಲ್ ನ್ಯೂಸ್

ಸಿಎಂ ಸಿದ್ದು ಐಸಿಸ್‌ ಉಗ್ರನ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡ್ರಾ..? ಯತ್ನಾಳ್‌ ಮಾಡಿದ ಆರೋಪಗಳೇನು, ನೀಡಿದ ದಾಖಲೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

170

ನ್ಯೂಸ್ ನಾಟೌಟ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗೂ ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿರುವ ಚಿತ್ರಗಳನ್ನು ಅಪ್ಲೋಡ್‌ ಮಾಡಿದ್ದಾರೆ.

“ಭಯೋತ್ಪಾದಕ ಬೆಂಬಲಿಗೆ ಹಿಂದೆಯೂ ಹಲವಾರು ಬಾರಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದ. ಕೆಲವೇ ದಿನಗಳಲ್ಲಿ ತನ್ವಿರ್ ಪೀರಾ ಎಂಬ ಭಯೋತ್ಪಾದಕ ಬೆಂಬಲಿಗನ ಇನ್ನಷ್ಟು ವಿವರಗಳನ್ನು ಬಹಿರಂಗಗೊಳಿಸುತ್ತೇನೆ. ಈತನು ಮಧ್ಯಪ್ರಾಚ್ಯ ದೇಶಗಳಿಂದ ಹಣವನ್ನು ಭಾರತಕ್ಕೆ ತರುವ ಹಾಗು ಭಾರತದ ಚಟುವಟಿಕಗಳ ಮಾಹಿತಿಯನ್ನು ಅರಬ್ ದೇಶಗಳಿಗೆ ರವಾನಿಸುವ ಕೆಲಸ ಮಾಡುತ್ತಿದ್ದಾನೆ.

ಇಂದು ಬೆಳಗಾವಿಯಲ್ಲಿ ಮುಂಜಾನೆ ನಾನು ಮುಖ್ಯಮಂತ್ರಿಗಳು ಐಸಿಸ್ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಹೇಳಿದ್ದೆ. ರಾಜ್ಯ ಪೊಲೀಸ್, ಕೇಂದ್ರೀಯ ತನಿಖಾ ಸಂಸ್ಥೆಗಳು ಈ ಕುರಿತು ವಿಚಾರಣೆ ಮಾಡಬೇಕು ಎಂದು ಆಗ್ರಹಿಸುತ್ತಿದ್ದೇನೆ”, ಎಂದು ಯತ್ನಾಳ್ ಬರೆದುಕೊಂಡಿದ್ದಾರೆ.

See also  ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಪ್ರಕರಣ: ಇಬ್ಬರು ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್​ಶೀಟ್ ಸಲ್ಲಿಕೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget