ಕರಾವಳಿಕೊಡಗು

ಮಡಿಕೇರಿ: ಚಾರಣಕ್ಕೆ ತೆರಳಿದ್ದ ಯುವಕನಿಗೆ ಹೃದಯಾಘಾತ..! ಬೆಟ್ಟದಲ್ಲೇ ಕುಸಿದು ಬಿದ್ದು ಕೊನೆಯುಸಿರು

152

ನ್ಯೂಸ್ ನಾಟೌಟ್ : ಮಡಿಕೇರಿಗೆಂದು(Madikeri) ಚಾರಣಕ್ಕೆ (Trekking) ತೆರಳಿದ್ದ ಯುವಕನೋರ್ವ ಹೃದಯಾಘಾತದಿಂದ ಉಸಿರು ಚೆಲ್ಲಿದ ಘಟನೆ ನಡೆದಿದೆ. ಜತಿನ್ ಕುಮಾರ್ (25) ಬಾರದ ಲೋಕಕ್ಕೆ ತೆರಳಿದ ಯುವಕ ಎಂದು ಗುರುತಿಸಲಾಗಿದೆ.

ಈತ ಹರಿಯಾಣ (Haryana) ಮೂಲದ ನಿವಾಸಿ ಎಂದು ತಿಳಿದು ಬಂದಿದೆ.ಕೊಡಗು ಜಿಲ್ಲೆಯ ಮಡಿಕೇರಿ ತಾ. ತಡಿಯಂಡಮೋಳು ಬೆಟ್ಟ ವೀಕ್ಷಣೆ ವೇಳೆ ಈ ಅವಘಡ ಸಂಭವಿಸಿದೆ.ಬೆಂಗಳೂರಿನ ಖಾಸಗಿ ಕಂಪನಿ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜತಿನ್ ಕುಮಾರ್, ತನ್ನ ಸ್ನೇಹಿತರೊಂದಿಗೆ ಮಡಿಕೇರಿಗೆ ಆಗಮಿಸಿದ್ದ. ಅಂತೆಯೇ ಭಾನುವಾರ ಬೆಟ್ಟದ ಮೇಲೆ ತಲುಪಿದಾಗ ಎದೆನೋವು ಕಾಣಿಸಿಕೊಂಡಿದೆ. ಕೆಲಹೊತ್ತಿನಲ್ಲೇ ಎದೆ ನೋವು ಜಾಸ್ತಿ ಆಗಿ ಜತಿನ್ ಸ್ಥಳದಲ್ಲೇ ಕುಸಿದು ಬಿದ್ದು ದುರಂತ ಅಂತ್ಯ ಕಂಡಿದ್ದಾನೆ ಎಂದು ತಿಳಿದು ಬಂದಿದೆ.

ಈ ವಿಚಾರವನ್ನು ಸ್ನೇಹಿತರು ಕೂಡಲೇ ಸ್ಥಳೀಯರ ಸಹಾಯದಿಂದ ಪೊಲೀಸರಿಗೆ ತಿಳಿಸಿದ್ದು, ಅವರು ಸ್ಥಳಕ್ಕೆ ದೌಡಾಯಿಸಿದರು. ನಂತರ ಬೆಟ್ಟದ ತುದಿಯಿಂದ ಕಚ್ಚಾರಸ್ತೆಯಲ್ಲಿ ಹರಸಾಹಸಪಟ್ಟು ದೇಹವನ್ನು ಪೊಲೀಸರು ತಂದಿದ್ದಾರೆ. ಈ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ‘ಅರೆಭಾಷೆ’ ಪದಕೋಶದಲ್ಲಿ 18 ಸಾವಿರ ಪದ ದಾಖಲೆ
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget