ದೇಶ-ಪ್ರಪಂಚ

ಬುದ್ದಿವಾದ ಹೇಳಿದ್ದಕ್ಕೆ ಚಾಕುವಿನಿಂದ ಇರಿದ ಅನ್ಯಕೋಮಿನ ಯುವಕರು..!’ವೇಗವಾಗಿ ವಾಹನ ಚಲಾಯಿಸಬೇಡಿ’ ಎಂದಿದ್ದೇ ಯುವಕನ ಪಾಲಿಗೆ ಮುಳುವಾಯ್ತು…

ನ್ಯೂಸ್‌ ನಾಟೌಟ್‌ : ಈ ಸಮಾಜವನ್ನು ಅರ್ಥ ಮಾಡಿಕೊಳ್ಳೋದೆ ಕಷ್ಟ.ಜೀವನ ಚೆನ್ನಾಗಿರ್ಲಿ ಅಂತ ಬುದ್ಧಿವಾದ ಹೇಳಿದ್ರೂ ಕಷ್ಟ.ಬುದ್ದಿವಾದ ಹೇಳಿಲ್ಲಂದ್ರೆ ಮತ್ತೆ ಮತ್ತೆ ಎಡವಟ್ಟುಗಳನ್ನು ಮಾಡ್ತಾನೆ ಇರ್ತಾರೆ ಜನ.ಹೀಗೆ ಇಲ್ಲೊಬ್ಬ ಯುವಕನೋರ್ವ ವೇಗವಾಗಿ ಗಾಡಿ ಓಡಿಸುತ್ತಿದ್ದುದ್ದನ್ನು ಪ್ರಶ್ನಿಸಿದ ಕಾರಣಕ್ಕೆ ಅನ್ಯಕೋಮಿನ ಯುವಕರ ಗುಂಪೊಂದು ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ದೊಡ್ಡಪೇಟೆಯಲ್ಲಿ ನಡೆದಿದೆ.

ಖಾಸಗಿ ಕಾಲೇಜಿನಲ್ಲಿ ಕಂಪ್ಯೂಟರ್​ ಆಗಿ ಕಾರ್ಯನಿರ್ವಹಿಸುತ್ತಿರುವ ಸುಶೀಲ್​ (23) ಗಂಭೀರವಾಗಿ ಗಾಯಗೊಂಡ ಯುವಕ ಎಂದು ತಿಳಿದು ಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಮಾತನಾಡಿ “ಗಾಯಾಳು ಯುವಕನನ್ನು ಸುಶೀಲ್ ಎಂದು ಗುರುತಿಸಲಾಗಿದೆ. ಇವರು ಕುಮುದ್ವತಿ ಕಾಲೇಜ್‌ನಲ್ಲಿ ಕಂಪ್ಯೂಟರ್ ಅಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಬೈಕ್ ನಲ್ಲಿ ವೀಲಿಂಗ್ ಮಾಡಬೇಡಿ ಎಂದು ಬುದ್ಧಿವಾದ ಹೇಳಿದ್ದಕ್ಕೆ ಅನ್ಯಕೋಮಿನ ನಾಲ್ವರು ದುಷ್ಕರ್ಮಿಗಳ ತಂಡ ಎದೆ ಹಾಗೂ ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಗಾಯಗೊಂಡಿರುವ ಯುವಕನ ಸ್ಥಿತಿ ಸ್ಥಿರವಾಗಿದೆ” ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಘಟನಾ ಸ್ಥಳಕ್ಕೆ ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆಯನ್ನು ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Related posts

ದೇವಸ್ಥಾನಗಳ ಅರ್ಚಕರಿಗೆ ಪ್ರತಿ ತಿಂಗಳು 18 ಸಾವಿರ ಸಹಾಯಧನ ಘೋಷಿಸಿದ ಕೇಜ್ರಿವಾಲ್‌, ಇನ್ನೂ ಹಲವು ಯೋಜನೆಗಳ ಘೋಷಣೆ

ಟಾಯ್ಲೆಟ್‌ ನಿಂದ ಆನ್‌ ಲೈನ್‌ ಮೀಟಿಂಗ್ ಗೆ ಜಾಯಿನ್‌ ಆದ ಮಾಜಿ ಮೇಯರ್..! ಆತನ ಎಡವಟ್ಟಿನಿಂದ ಎಲ್ಲರಿಗೂ ಮುಜುಗರ..! ಇಲ್ಲಿದೆ ವೈರಲ್ ವಿಡಿಯೋ

ಐದು ತಿಂಗಳು ರಜೆಯಲ್ಲಿದ್ದರೂ ಸಂಬಳ ಪಡೆದ ಶಿಕ್ಷಕಿ! ಇಲ್ಲಿದೆ ಸರಕಾರಿ ಶಾಲಾ ಶಿಕ್ಷಕಿ ಮಾಡಿದ ಖತರ್ನಾಕ್ ಪ್ಲಾನ್!